12:04 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮೊರಬ ಶ್ರೀವೀರಭದ್ರೇಶ್ವರ ಸ್ವಾಮಿ ದೇಗುಲದಲ್ಲಿ ಹೆಜ್ಜೇನು ಗೂಡು: ಶುಭ ಅಶುಭದ ಲೆಕ್ಕಾಚಾರ; ಹೂ ಫಲ ಕೇಳಿದ ಗ್ರಾಮದ ದೈವಸ್ಥರು!!

08/09/2021, 09:54

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬ ಗ್ರಾಮದಲ್ಲಿ, ಶ್ರೀವೀರಭದ್ರೇಶ್ವರ ದೇವಸ್ಥಾನದ ಟರಾಸಿನ್ನಲ್ಲಿ ಹೆಜ್ಜೇನು ಹುಳುಗಳು ಗೂಡು ಕಟ್ಟಿವೆ. ಬೃಹದಾಕಾರದಲ್ಲಿ ನಿರ್ಮಿಸಲಾಗಿರುವ ಹೆಜ್ಜೇನು ಗೂಡು ದೇವರ ದರ್ಶನಕ್ಕೆ ಬರುವ ಭಕ್ತರನ್ನ ಸ್ವಾಗತಿಸುತ್ತಿವೆ. ಅಸಂಖ್ಯಾತ ಹೆಜ್ಜೇನು ಹುಳುಗಳು ಬೃಹತ್ ಗೂಡು(ಹುಟ್ಟು)ಕಟ್ಟಿದ್ದು ಶುಭವೋ ಅಶುಭವೋ ಭಕ್ತರಿಗೆ ತೊಂದರೆ ಕೊಡುತ್ತವೆಯೋ..!?ಎಂಬ ಆತಂಕ ಗ್ರಾಮದ ದೈವಸ್ಥರಲ್ಲಿ ಮನೆ ಮಾಡಿತ್ತು.ಅದಕ್ಕಾಗಿ ಪ್ರಾರಂಭದಲ್ಲಿಯೇ ಈ ಬಗ್ಗೆ ಗ್ರಾಮದ ದೈವಸ್ಥರು, ಶ್ರೀ ವೀರಭದ್ರ ದೇವರಲ್ಲಿ ಶುಭ ಅಶುಭ ಕುರಿತು ಮತ್ತು ಜೇನು ಹುಟ್ಟು ತೆರವು ಗೊಳಿಸಲು ಅನುಮತಿ ಕೋರಿ ಹೂ ಫಲ ಕೇಳಿದ್ದಾರೆ. ಶ್ರೀವೀರಭದ್ರೇಶ್ವರ ಸ್ವಾಮಿ ಎಡಭಾಗದ ಹೂ ಕೊಡೋ ಮೂಲಕ, ಭಕ್ತರಿಗೆ ಅಭಯ ನೀಡಿದ್ದು ಹಾಗೂ ಜೇನು ಹುಳುಗಳಿಗೂ ಆಶ್ರಯ ಹಸ್ತ ನೀಡಿದ್ದಾರೆ.

ಈ ಹೆಜ್ಜೇನು ಕಳೆದ ಆರು ತಿಂಗಳಿಂದ ದೇವಸ್ಥಾನದ ಮಧ್ಯ ಭಾಗದಲ್ಲಿ ನಿರ್ಮಾಣವಾಗಿದೆ.

ದೇವಸ್ಥಾನದ ಪ್ರಾಂಗಣದಲ್ಲಿ ಸದಾ ಬೃಹತ್ ಗಾತ್ರದ ಹೆಜ್ಜೇನು ಹುಳುಗಳು ಹಾರಾಡುತ್ತಿರುತ್ತವೆ. ದೇವರ ದರ್ಶನಕ್ಕೆ ಬರುವ ಭಕ್ತರನ್ನ ನಯವಾಗಿ ಸ್ಪರ್ಶಿಸುವ ನಿರುಪದ್ರವಿಗಳಾಗಿದ್ದು, ಹೆಜ್ಜೇನು ಹುಳುಗಳು ಭಕ್ತರನ್ನು ಸ್ವಾಗತಿಸಿ ಕೊಳ್ಳುತ್ತಿವೆ ಎಂಬಂತೆ  ಸನ್ನಿವೇಶ ಸೃಷ್ಠಿಯಾಗಿದೆ. ಕಳೆದ ಆರು ತಿಂಗಳಿಂದ ನಿರ್ಮಾಣವಾಗಿರುವ ಹೆಜ್ಜೇನಿನ ಬೃಹತ್ ಗೂಡು ಬಲು ಆಕರ್ಷಕವಾಗಿದ್ದು, ಹುಳುಗಳಿಂದ ಯಾರಿಗೂ ಯಾವೂದೇ ಕಾರಣಕ್ಕೂ ತೊಂದರೆ ಆಗಿಲ್ಲ. ಹೆಜ್ಜೆನು ಗೂಡು ನಿರ್ಮಾಣದಿಂದ ಶ್ರೀವೀರಭದ್ರೇಶ್ವರ ಭಕ್ತರ ಪಾಲಿಗೂ ಶುಭ ಶಕುನವಾಗಿ ಪರಿಣಮಿಸಿದೆ ಯಂತೆ, ದೇವಸ್ಥಾನದಲ್ಲಿ ಹೆಜ್ಜೇನು ವಾಸ ಮಾಡಿರುವುದರಿಂದಾಗಿ ಸಕಲರಿಗೂ ಹಿತವಾಗಲಿದೆ ಎಂದು ಆಸ್ತಿಕರು ಆಶಾಮನೋಭಾವ ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು