7:04 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಮೊರಬ ಶ್ರೀವೀರಭದ್ರೇಶ್ವರ ಸ್ವಾಮಿ ದೇಗುಲದಲ್ಲಿ ಹೆಜ್ಜೇನು ಗೂಡು: ಶುಭ ಅಶುಭದ ಲೆಕ್ಕಾಚಾರ; ಹೂ ಫಲ ಕೇಳಿದ ಗ್ರಾಮದ ದೈವಸ್ಥರು!!

08/09/2021, 09:54

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬ ಗ್ರಾಮದಲ್ಲಿ, ಶ್ರೀವೀರಭದ್ರೇಶ್ವರ ದೇವಸ್ಥಾನದ ಟರಾಸಿನ್ನಲ್ಲಿ ಹೆಜ್ಜೇನು ಹುಳುಗಳು ಗೂಡು ಕಟ್ಟಿವೆ. ಬೃಹದಾಕಾರದಲ್ಲಿ ನಿರ್ಮಿಸಲಾಗಿರುವ ಹೆಜ್ಜೇನು ಗೂಡು ದೇವರ ದರ್ಶನಕ್ಕೆ ಬರುವ ಭಕ್ತರನ್ನ ಸ್ವಾಗತಿಸುತ್ತಿವೆ. ಅಸಂಖ್ಯಾತ ಹೆಜ್ಜೇನು ಹುಳುಗಳು ಬೃಹತ್ ಗೂಡು(ಹುಟ್ಟು)ಕಟ್ಟಿದ್ದು ಶುಭವೋ ಅಶುಭವೋ ಭಕ್ತರಿಗೆ ತೊಂದರೆ ಕೊಡುತ್ತವೆಯೋ..!?ಎಂಬ ಆತಂಕ ಗ್ರಾಮದ ದೈವಸ್ಥರಲ್ಲಿ ಮನೆ ಮಾಡಿತ್ತು.ಅದಕ್ಕಾಗಿ ಪ್ರಾರಂಭದಲ್ಲಿಯೇ ಈ ಬಗ್ಗೆ ಗ್ರಾಮದ ದೈವಸ್ಥರು, ಶ್ರೀ ವೀರಭದ್ರ ದೇವರಲ್ಲಿ ಶುಭ ಅಶುಭ ಕುರಿತು ಮತ್ತು ಜೇನು ಹುಟ್ಟು ತೆರವು ಗೊಳಿಸಲು ಅನುಮತಿ ಕೋರಿ ಹೂ ಫಲ ಕೇಳಿದ್ದಾರೆ. ಶ್ರೀವೀರಭದ್ರೇಶ್ವರ ಸ್ವಾಮಿ ಎಡಭಾಗದ ಹೂ ಕೊಡೋ ಮೂಲಕ, ಭಕ್ತರಿಗೆ ಅಭಯ ನೀಡಿದ್ದು ಹಾಗೂ ಜೇನು ಹುಳುಗಳಿಗೂ ಆಶ್ರಯ ಹಸ್ತ ನೀಡಿದ್ದಾರೆ.

ಈ ಹೆಜ್ಜೇನು ಕಳೆದ ಆರು ತಿಂಗಳಿಂದ ದೇವಸ್ಥಾನದ ಮಧ್ಯ ಭಾಗದಲ್ಲಿ ನಿರ್ಮಾಣವಾಗಿದೆ.

ದೇವಸ್ಥಾನದ ಪ್ರಾಂಗಣದಲ್ಲಿ ಸದಾ ಬೃಹತ್ ಗಾತ್ರದ ಹೆಜ್ಜೇನು ಹುಳುಗಳು ಹಾರಾಡುತ್ತಿರುತ್ತವೆ. ದೇವರ ದರ್ಶನಕ್ಕೆ ಬರುವ ಭಕ್ತರನ್ನ ನಯವಾಗಿ ಸ್ಪರ್ಶಿಸುವ ನಿರುಪದ್ರವಿಗಳಾಗಿದ್ದು, ಹೆಜ್ಜೇನು ಹುಳುಗಳು ಭಕ್ತರನ್ನು ಸ್ವಾಗತಿಸಿ ಕೊಳ್ಳುತ್ತಿವೆ ಎಂಬಂತೆ  ಸನ್ನಿವೇಶ ಸೃಷ್ಠಿಯಾಗಿದೆ. ಕಳೆದ ಆರು ತಿಂಗಳಿಂದ ನಿರ್ಮಾಣವಾಗಿರುವ ಹೆಜ್ಜೇನಿನ ಬೃಹತ್ ಗೂಡು ಬಲು ಆಕರ್ಷಕವಾಗಿದ್ದು, ಹುಳುಗಳಿಂದ ಯಾರಿಗೂ ಯಾವೂದೇ ಕಾರಣಕ್ಕೂ ತೊಂದರೆ ಆಗಿಲ್ಲ. ಹೆಜ್ಜೆನು ಗೂಡು ನಿರ್ಮಾಣದಿಂದ ಶ್ರೀವೀರಭದ್ರೇಶ್ವರ ಭಕ್ತರ ಪಾಲಿಗೂ ಶುಭ ಶಕುನವಾಗಿ ಪರಿಣಮಿಸಿದೆ ಯಂತೆ, ದೇವಸ್ಥಾನದಲ್ಲಿ ಹೆಜ್ಜೇನು ವಾಸ ಮಾಡಿರುವುದರಿಂದಾಗಿ ಸಕಲರಿಗೂ ಹಿತವಾಗಲಿದೆ ಎಂದು ಆಸ್ತಿಕರು ಆಶಾಮನೋಭಾವ ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು