10:57 PM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮೊರಬ ಶ್ರೀವೀರಭದ್ರೇಶ್ವರ ಸ್ವಾಮಿ ದೇಗುಲದಲ್ಲಿ ಹೆಜ್ಜೇನು ಗೂಡು: ಶುಭ ಅಶುಭದ ಲೆಕ್ಕಾಚಾರ; ಹೂ ಫಲ ಕೇಳಿದ ಗ್ರಾಮದ ದೈವಸ್ಥರು!!

08/09/2021, 09:54

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬ ಗ್ರಾಮದಲ್ಲಿ, ಶ್ರೀವೀರಭದ್ರೇಶ್ವರ ದೇವಸ್ಥಾನದ ಟರಾಸಿನ್ನಲ್ಲಿ ಹೆಜ್ಜೇನು ಹುಳುಗಳು ಗೂಡು ಕಟ್ಟಿವೆ. ಬೃಹದಾಕಾರದಲ್ಲಿ ನಿರ್ಮಿಸಲಾಗಿರುವ ಹೆಜ್ಜೇನು ಗೂಡು ದೇವರ ದರ್ಶನಕ್ಕೆ ಬರುವ ಭಕ್ತರನ್ನ ಸ್ವಾಗತಿಸುತ್ತಿವೆ. ಅಸಂಖ್ಯಾತ ಹೆಜ್ಜೇನು ಹುಳುಗಳು ಬೃಹತ್ ಗೂಡು(ಹುಟ್ಟು)ಕಟ್ಟಿದ್ದು ಶುಭವೋ ಅಶುಭವೋ ಭಕ್ತರಿಗೆ ತೊಂದರೆ ಕೊಡುತ್ತವೆಯೋ..!?ಎಂಬ ಆತಂಕ ಗ್ರಾಮದ ದೈವಸ್ಥರಲ್ಲಿ ಮನೆ ಮಾಡಿತ್ತು.ಅದಕ್ಕಾಗಿ ಪ್ರಾರಂಭದಲ್ಲಿಯೇ ಈ ಬಗ್ಗೆ ಗ್ರಾಮದ ದೈವಸ್ಥರು, ಶ್ರೀ ವೀರಭದ್ರ ದೇವರಲ್ಲಿ ಶುಭ ಅಶುಭ ಕುರಿತು ಮತ್ತು ಜೇನು ಹುಟ್ಟು ತೆರವು ಗೊಳಿಸಲು ಅನುಮತಿ ಕೋರಿ ಹೂ ಫಲ ಕೇಳಿದ್ದಾರೆ. ಶ್ರೀವೀರಭದ್ರೇಶ್ವರ ಸ್ವಾಮಿ ಎಡಭಾಗದ ಹೂ ಕೊಡೋ ಮೂಲಕ, ಭಕ್ತರಿಗೆ ಅಭಯ ನೀಡಿದ್ದು ಹಾಗೂ ಜೇನು ಹುಳುಗಳಿಗೂ ಆಶ್ರಯ ಹಸ್ತ ನೀಡಿದ್ದಾರೆ.

ಈ ಹೆಜ್ಜೇನು ಕಳೆದ ಆರು ತಿಂಗಳಿಂದ ದೇವಸ್ಥಾನದ ಮಧ್ಯ ಭಾಗದಲ್ಲಿ ನಿರ್ಮಾಣವಾಗಿದೆ.

ದೇವಸ್ಥಾನದ ಪ್ರಾಂಗಣದಲ್ಲಿ ಸದಾ ಬೃಹತ್ ಗಾತ್ರದ ಹೆಜ್ಜೇನು ಹುಳುಗಳು ಹಾರಾಡುತ್ತಿರುತ್ತವೆ. ದೇವರ ದರ್ಶನಕ್ಕೆ ಬರುವ ಭಕ್ತರನ್ನ ನಯವಾಗಿ ಸ್ಪರ್ಶಿಸುವ ನಿರುಪದ್ರವಿಗಳಾಗಿದ್ದು, ಹೆಜ್ಜೇನು ಹುಳುಗಳು ಭಕ್ತರನ್ನು ಸ್ವಾಗತಿಸಿ ಕೊಳ್ಳುತ್ತಿವೆ ಎಂಬಂತೆ  ಸನ್ನಿವೇಶ ಸೃಷ್ಠಿಯಾಗಿದೆ. ಕಳೆದ ಆರು ತಿಂಗಳಿಂದ ನಿರ್ಮಾಣವಾಗಿರುವ ಹೆಜ್ಜೇನಿನ ಬೃಹತ್ ಗೂಡು ಬಲು ಆಕರ್ಷಕವಾಗಿದ್ದು, ಹುಳುಗಳಿಂದ ಯಾರಿಗೂ ಯಾವೂದೇ ಕಾರಣಕ್ಕೂ ತೊಂದರೆ ಆಗಿಲ್ಲ. ಹೆಜ್ಜೆನು ಗೂಡು ನಿರ್ಮಾಣದಿಂದ ಶ್ರೀವೀರಭದ್ರೇಶ್ವರ ಭಕ್ತರ ಪಾಲಿಗೂ ಶುಭ ಶಕುನವಾಗಿ ಪರಿಣಮಿಸಿದೆ ಯಂತೆ, ದೇವಸ್ಥಾನದಲ್ಲಿ ಹೆಜ್ಜೇನು ವಾಸ ಮಾಡಿರುವುದರಿಂದಾಗಿ ಸಕಲರಿಗೂ ಹಿತವಾಗಲಿದೆ ಎಂದು ಆಸ್ತಿಕರು ಆಶಾಮನೋಭಾವ ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು