6:26 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮೊರಬ ಶ್ರೀವೀರಭದ್ರೇಶ್ವರ ಸ್ವಾಮಿ ದೇಗುಲದಲ್ಲಿ ಹೆಜ್ಜೇನು ಗೂಡು: ಶುಭ ಅಶುಭದ ಲೆಕ್ಕಾಚಾರ; ಹೂ ಫಲ ಕೇಳಿದ ಗ್ರಾಮದ ದೈವಸ್ಥರು!!

08/09/2021, 09:54

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬ ಗ್ರಾಮದಲ್ಲಿ, ಶ್ರೀವೀರಭದ್ರೇಶ್ವರ ದೇವಸ್ಥಾನದ ಟರಾಸಿನ್ನಲ್ಲಿ ಹೆಜ್ಜೇನು ಹುಳುಗಳು ಗೂಡು ಕಟ್ಟಿವೆ. ಬೃಹದಾಕಾರದಲ್ಲಿ ನಿರ್ಮಿಸಲಾಗಿರುವ ಹೆಜ್ಜೇನು ಗೂಡು ದೇವರ ದರ್ಶನಕ್ಕೆ ಬರುವ ಭಕ್ತರನ್ನ ಸ್ವಾಗತಿಸುತ್ತಿವೆ. ಅಸಂಖ್ಯಾತ ಹೆಜ್ಜೇನು ಹುಳುಗಳು ಬೃಹತ್ ಗೂಡು(ಹುಟ್ಟು)ಕಟ್ಟಿದ್ದು ಶುಭವೋ ಅಶುಭವೋ ಭಕ್ತರಿಗೆ ತೊಂದರೆ ಕೊಡುತ್ತವೆಯೋ..!?ಎಂಬ ಆತಂಕ ಗ್ರಾಮದ ದೈವಸ್ಥರಲ್ಲಿ ಮನೆ ಮಾಡಿತ್ತು.ಅದಕ್ಕಾಗಿ ಪ್ರಾರಂಭದಲ್ಲಿಯೇ ಈ ಬಗ್ಗೆ ಗ್ರಾಮದ ದೈವಸ್ಥರು, ಶ್ರೀ ವೀರಭದ್ರ ದೇವರಲ್ಲಿ ಶುಭ ಅಶುಭ ಕುರಿತು ಮತ್ತು ಜೇನು ಹುಟ್ಟು ತೆರವು ಗೊಳಿಸಲು ಅನುಮತಿ ಕೋರಿ ಹೂ ಫಲ ಕೇಳಿದ್ದಾರೆ. ಶ್ರೀವೀರಭದ್ರೇಶ್ವರ ಸ್ವಾಮಿ ಎಡಭಾಗದ ಹೂ ಕೊಡೋ ಮೂಲಕ, ಭಕ್ತರಿಗೆ ಅಭಯ ನೀಡಿದ್ದು ಹಾಗೂ ಜೇನು ಹುಳುಗಳಿಗೂ ಆಶ್ರಯ ಹಸ್ತ ನೀಡಿದ್ದಾರೆ.

ಈ ಹೆಜ್ಜೇನು ಕಳೆದ ಆರು ತಿಂಗಳಿಂದ ದೇವಸ್ಥಾನದ ಮಧ್ಯ ಭಾಗದಲ್ಲಿ ನಿರ್ಮಾಣವಾಗಿದೆ.

ದೇವಸ್ಥಾನದ ಪ್ರಾಂಗಣದಲ್ಲಿ ಸದಾ ಬೃಹತ್ ಗಾತ್ರದ ಹೆಜ್ಜೇನು ಹುಳುಗಳು ಹಾರಾಡುತ್ತಿರುತ್ತವೆ. ದೇವರ ದರ್ಶನಕ್ಕೆ ಬರುವ ಭಕ್ತರನ್ನ ನಯವಾಗಿ ಸ್ಪರ್ಶಿಸುವ ನಿರುಪದ್ರವಿಗಳಾಗಿದ್ದು, ಹೆಜ್ಜೇನು ಹುಳುಗಳು ಭಕ್ತರನ್ನು ಸ್ವಾಗತಿಸಿ ಕೊಳ್ಳುತ್ತಿವೆ ಎಂಬಂತೆ  ಸನ್ನಿವೇಶ ಸೃಷ್ಠಿಯಾಗಿದೆ. ಕಳೆದ ಆರು ತಿಂಗಳಿಂದ ನಿರ್ಮಾಣವಾಗಿರುವ ಹೆಜ್ಜೇನಿನ ಬೃಹತ್ ಗೂಡು ಬಲು ಆಕರ್ಷಕವಾಗಿದ್ದು, ಹುಳುಗಳಿಂದ ಯಾರಿಗೂ ಯಾವೂದೇ ಕಾರಣಕ್ಕೂ ತೊಂದರೆ ಆಗಿಲ್ಲ. ಹೆಜ್ಜೆನು ಗೂಡು ನಿರ್ಮಾಣದಿಂದ ಶ್ರೀವೀರಭದ್ರೇಶ್ವರ ಭಕ್ತರ ಪಾಲಿಗೂ ಶುಭ ಶಕುನವಾಗಿ ಪರಿಣಮಿಸಿದೆ ಯಂತೆ, ದೇವಸ್ಥಾನದಲ್ಲಿ ಹೆಜ್ಜೇನು ವಾಸ ಮಾಡಿರುವುದರಿಂದಾಗಿ ಸಕಲರಿಗೂ ಹಿತವಾಗಲಿದೆ ಎಂದು ಆಸ್ತಿಕರು ಆಶಾಮನೋಭಾವ ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು