3:00 AM Sunday27 - July 2025
ಬ್ರೇಕಿಂಗ್ ನ್ಯೂಸ್
ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;…

ಇತ್ತೀಚಿನ ಸುದ್ದಿ

ಮೊರಬದಲ್ಲಿ ಕಣ್ಣಿನ ಉಚಿತ ಶಸ್ತ್ರ ಚಿಕಿತ್ಸೆ ಶಿಬಿರ; ಸಮಾಜ ಸೇವೆಯಿಂದ ಸಂತೃಪ್ತಿ: ಅಬ್ದುಲ್ ರಹೆಮಾನ್

30/01/2024, 21:55

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮೊರಬ ಗ್ರಾಮದಲ್ಲಿ, ಸಮಾಜ ಸೇವಕ ಅಬ್ದುಲ್ ರಹೆಮನ್ ರವರ ನೇತೃತ್ವದಲ್ಲಿ ಜ30ರಂದು ಸ್ನೇಹಿತರ ಬಳಗದಿಂದ ಸತತ 7ನೇ ವರ್ಷದ ಸಮಾಜ ಸೇವಾರ್ಥ, “ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಶಿಬಿರ”
ಆಯೋಜಿಸಲಾಗಿತ್ತು.

ಶಿಬಿರದ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಸ್ನೇಹಿತರ ಬಳಗದ ಅಧ್ಯಕ್ಷ ಅಬ್ದುಲ್ ರಹೆಮಾನ್ ರವರು ಮಾತನಾಡಿದರು. ಸಮಾಜ ಸೇವೆಯಿಂದಲೇ ಆತ್ಮ ತೃಪ್ತಿ ದೊರಕಲಿದೆ, ಇದು ಸ್ನೇಹಿತರ ಬಳಗದ ದೇಯೋದ್ಧೇಶವಾಗಿದೆ. ಈ ನಿಟ್ಟಿನಲ್ಲಿ ಸತತ ಏಳನೇ ವರ್ಷಗಳಿಂದ ಶ್ರಮಿಸುತ್ತಿದೆ, ಅದಕ್ಕೆಲ್ಲಾ ಸಮಸ್ತ ಸ್ನೇಹಿತರ ಬಳಗದ ಸರ್ವ ಸದಸ್ಯರ ಶ್ರಮದಾನವೇ ಕಾರಣವಾಗಿದೆ. “ಸರ್ವೇ ಜನಃ ಸುಖೀನೋ ಭವಂತು” ಎಂಬ ಧೇಯ ದೊಂದಿಗೆ, ಸ್ನೇಹಿತರ ಬಳಗ ಸನಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ ಎಂದರು. ನೇತ್ರಲಕ್ಷ್ಮಿ ವೈದ್ಯಾಲಯ ಡಾಕ್ಟರ್ ದೇಶಪಾಂಡೆ ಹಾಗೂ ಸ್ನೇಹಿತರ ಬಳಗದ ಉಪಾಧ್ಯಕ್ಷ ಬಿ ಖಾದರ್ ಭಾಷಾ, ಸದಸ್ಯರಾದ ಅಬ್ದುಲ್ ವಾಹಿದ್, ಆಲಂ ಭಾಷ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಯೋಜನಾ ಘಟಕ, ಎನ್.ಎಸ್.ಎಸ್ ವಿಭಾಗದ ಅಧಿಕಾರಿ ಜಗದೀಶ್, ಪ್ರಾಂಶುಪಾಲರಾದ ಸುರೇಶ್ ರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಿವಣ್ಣ, ಫೈರೋಜ್ ಆಲಂ, ಮೌಲ್ವಿ ಸಾಬ್, ಗ್ರಾಮ ಪಂಚಾಯ್ತಿ ಸದಸ್ಯ ಮೆಹಬೂಬ್ ಬಾಷಾ, ಗ್ರಾಮ ಪಂಚಾಯಿತಿ ಸದಸ್ಯ ಚನ್ನಬಸಪ್ಪ, ಗ್ರಾಮ ಪಂಚಾಯ್ತಿ ಸದಸ್ಯ ಹೊನ್ನೂರವಲಿ, ಮೊರಬ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಚಂದ್ರಪ್ಪ, ಜನಪ್ರತಿನಿಧಿ ಕೊಟ್ರೇಶ್ ಉಪಸ್ಥಿತರಿದ್ದರು. 110 ಜನರನ್ನು ಕಣ್ಣಿನ ಶಸ್ತ್ರ ಚಿಕಿತ್ಸೆ ಗೆ ಅಯ್ಕೆ ಮಾಡಲಾಯಿತು. ಒಟ್ಟು 230 ಜನರು ತಪಾಸಣೆ ಮಾಡಿ, ಓಪಿಡಿ ಸೇವೆ ಸಲ್ಲಿಸಲಾಯಿತು. ಶಾಲಾ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯ್ತಿ ಸಿಬ್ಬಂದಿ, ಗ್ರಾಮದ ಹಿರಿಯರು ಮತ್ತು ಮುಖಂಡರು. ವಿವಿದ ಜನಪ್ರತಿನಿಧಿಗಳು, ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದು ಶಿಬಿರ ಯಶಸ್ಸಿಗೆ ಸಹರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು