8:51 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಆಸ್ತಿ ಪಾಲು ಮಾಡಿ ಕೊಡಲು ಒಪ್ಪದ ತಾಯಿ: ಮಲಗಿದ್ದಾಗ ಹೆತ್ತಬ್ಬೆಗೆ ಕಲ್ಲು ಎತ್ತಿ ಹಾಕಿ ಕೊಂದ ಪಾಪಿ ಮಗ

30/01/2026, 17:13

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಆಸ್ತಿ ಪಾಲು ಮಾಡದ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಜಕ್ಕೇರುಮಡಗು ತಾಂಡಾದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಚಂದವ್ವ (55) ಎಂದು ಗುರುತಿಸಲಾಗಿದೆ.
ಕೊಲೆ ಮಾಡಿದವನು ಚಂದವ್ವ ಅವರ ಪುತ್ರ ಕುಮಾರ ಎಂದು ಪೊಲೀಸರು ತಿಳಿಸಿದ್ದಾರೆ.

ಪಿತ್ರಾರ್ಜಿತವಾಗಿ ದೊರೆತ ಮೂರು ಎಕರೆ ಭೂಮಿಯನ್ನು ಪಾಲು ಮಾಡುವಂತೆ ಕುಮಾರ ತಾಯಿಯ ಮೇಲೆ ನಿರಂತರವಾಗಿ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಆಸ್ತಿ ಪಾಲು ಮಾಡಿ, ನನ್ನ ಪಾಲು ನನಗೆ ನೀಡಬೇಕು ಎಂದು ಕುಮಾರ ಒತ್ತಡ ಹೇರಿದ್ದಾನೆ. ಆದರೆ, ನಾನು ಬದುಕಿರುವವರೆಗೆ ಆಸ್ತಿ ಪಾಲು ಮಾಡುವುದಿಲ್ಲ ಎಂದು ತಾಯಿ ಚಂದವ್ವ ಹಠ ಹಿಡಿದಿದ್ದಾಳೆ.
ಇದೇ ಕಾರಣದಿಂದ ಕೋಪಗೊಂಡ ಕುಮಾರ ಮದ್ಯ ಸೇವಿಸಿ, ನಶೆಯಲ್ಲಿದ್ದ ಕುಮಾರ, ಮಲಗಿದ್ದ ತನ್ನ ತಾಯಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಕುರಿತು ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು