5:04 AM Monday7 - April 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

ಮೊಟ್ಟೆ ಹಗರಣ ಆರೋಪಕ್ಕೆ ಸಿಲುಕಿರುವ ಶಶಿಕಲಾ ಜೊಲ್ಲೆಗೆ ಝೀರೋ ಟ್ರಾಫಿಕ್ ವ್ಯವಸ್ಥೆ!: ಓಡೋಡಿ ಬಂದು ಪ್ರಮಾಣ ವಚನ ಸ್ವೀಕಾರ !!

04/08/2021, 23:03

ಬೆಂಗಳೂರು(reporterkarnataka.com): ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ಪೂರೈಕೆ ಟೆಂಡರ್ ಅವ್ಯವಹಾರ ಆರೋಪಕ್ಕೆ ಸಿಲುಕಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಕೊನೆಯ ಕ್ಷಣದಲ್ಲಿ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಜೊಲ್ಲೆ ಅವರನ್ನು ಜೀರೋ ಟ್ರಾಫಿಕ್ ನಲ್ಲಿ ರಾಜಭವನಕ್ಕೆ ಕರೆದು ತಂದು ಪ್ರಮಾಣ ವಚನ ಸ್ವೀಕರಿಸಲು ಅನುವು ಮಾಡಿಕೊಡಲಾಯಿತು.

ಮೊಟ್ಟೆ ಹಗರಣದಲ್ಲಿ ಸಿಲುಕಿಕೊಂಡಿರುವ ಜೊಲ್ಲೆ ಅವರಿಗೆ ಸಚಿವ ಸ್ಥಾನ ಕೈತಪ್ಪುವ ಎಲ್ಲ ಸಾಧ್ಯತೆಗಳಿತ್ತು. ಈ ಹಿನ್ನೆಲೆಯಲ್ಲಿ ಜೊಲ್ಲೆ ಅವರು ಪಕ್ಷದ ವರಿಷ್ಠರ ಮನವೊಲಿಸಲು ತನ್ನ ಪತಿ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರೊಂದಿಗೆ ದಿಲ್ಲಿಗೆ ತೆರಳಿದ್ದರು. ದಿಲ್ಲಿಯಿಂದ ಹಿಂತಿರುಗುವಾಗ ಕೊಂಚ ವಿಳಂಬವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮಾಣ ವಚನ ಸಮಾರಂಭವನ್ನು ಕೂಡ ಕೊಂಚ ವಿಳಂಬ ಮಾಡಲಾಗಿತ್ತು ಎನ್ನಲಾಗಿದೆ. ಆದರೂ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗಿತ್ತು.

ದಿಲ್ಲಿಯಿಂದ ವಿಶೇಷ ವಿಮಾನದಲ್ಲಿ  ಪತಿ ಅಣ್ಣಾ ಸಾಹೇಬ್ ಜೊಲ್ಲೆ ಅವರೊಂದಿಗೆ ಆಗಮಿಸಿದ ಶಶಿಕಲಾ ಜೊಲ್ಲೆ ಅವರನ್ನು ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಝಿರೋ ಟ್ರಾಫಿಕ್‍ನಲ್ಲಿ ರಾಜಭವನಕ್ಕೆ ಕರೆದು ತರಲಾಯಿತು. ಜೊಲ್ಲೆ ಅವರು ಕೊನೆಗೂ ಓಡೋಡಿ ಬಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು