4:30 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮೊಟ್ಟೆ ಹಗರಣ ಆರೋಪಕ್ಕೆ ಸಿಲುಕಿರುವ ಶಶಿಕಲಾ ಜೊಲ್ಲೆಗೆ ಝೀರೋ ಟ್ರಾಫಿಕ್ ವ್ಯವಸ್ಥೆ!: ಓಡೋಡಿ ಬಂದು ಪ್ರಮಾಣ ವಚನ ಸ್ವೀಕಾರ !!

04/08/2021, 23:03

ಬೆಂಗಳೂರು(reporterkarnataka.com): ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ಪೂರೈಕೆ ಟೆಂಡರ್ ಅವ್ಯವಹಾರ ಆರೋಪಕ್ಕೆ ಸಿಲುಕಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಕೊನೆಯ ಕ್ಷಣದಲ್ಲಿ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಜೊಲ್ಲೆ ಅವರನ್ನು ಜೀರೋ ಟ್ರಾಫಿಕ್ ನಲ್ಲಿ ರಾಜಭವನಕ್ಕೆ ಕರೆದು ತಂದು ಪ್ರಮಾಣ ವಚನ ಸ್ವೀಕರಿಸಲು ಅನುವು ಮಾಡಿಕೊಡಲಾಯಿತು.

ಮೊಟ್ಟೆ ಹಗರಣದಲ್ಲಿ ಸಿಲುಕಿಕೊಂಡಿರುವ ಜೊಲ್ಲೆ ಅವರಿಗೆ ಸಚಿವ ಸ್ಥಾನ ಕೈತಪ್ಪುವ ಎಲ್ಲ ಸಾಧ್ಯತೆಗಳಿತ್ತು. ಈ ಹಿನ್ನೆಲೆಯಲ್ಲಿ ಜೊಲ್ಲೆ ಅವರು ಪಕ್ಷದ ವರಿಷ್ಠರ ಮನವೊಲಿಸಲು ತನ್ನ ಪತಿ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರೊಂದಿಗೆ ದಿಲ್ಲಿಗೆ ತೆರಳಿದ್ದರು. ದಿಲ್ಲಿಯಿಂದ ಹಿಂತಿರುಗುವಾಗ ಕೊಂಚ ವಿಳಂಬವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮಾಣ ವಚನ ಸಮಾರಂಭವನ್ನು ಕೂಡ ಕೊಂಚ ವಿಳಂಬ ಮಾಡಲಾಗಿತ್ತು ಎನ್ನಲಾಗಿದೆ. ಆದರೂ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗಿತ್ತು.

ದಿಲ್ಲಿಯಿಂದ ವಿಶೇಷ ವಿಮಾನದಲ್ಲಿ  ಪತಿ ಅಣ್ಣಾ ಸಾಹೇಬ್ ಜೊಲ್ಲೆ ಅವರೊಂದಿಗೆ ಆಗಮಿಸಿದ ಶಶಿಕಲಾ ಜೊಲ್ಲೆ ಅವರನ್ನು ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಝಿರೋ ಟ್ರಾಫಿಕ್‍ನಲ್ಲಿ ರಾಜಭವನಕ್ಕೆ ಕರೆದು ತರಲಾಯಿತು. ಜೊಲ್ಲೆ ಅವರು ಕೊನೆಗೂ ಓಡೋಡಿ ಬಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು