1:51 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮೊಟ್ಟೆ ಹಗರಣ ಆರೋಪಕ್ಕೆ ಸಿಲುಕಿರುವ ಶಶಿಕಲಾ ಜೊಲ್ಲೆಗೆ ಝೀರೋ ಟ್ರಾಫಿಕ್ ವ್ಯವಸ್ಥೆ!: ಓಡೋಡಿ ಬಂದು ಪ್ರಮಾಣ ವಚನ ಸ್ವೀಕಾರ !!

04/08/2021, 23:03

ಬೆಂಗಳೂರು(reporterkarnataka.com): ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ಪೂರೈಕೆ ಟೆಂಡರ್ ಅವ್ಯವಹಾರ ಆರೋಪಕ್ಕೆ ಸಿಲುಕಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಕೊನೆಯ ಕ್ಷಣದಲ್ಲಿ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಜೊಲ್ಲೆ ಅವರನ್ನು ಜೀರೋ ಟ್ರಾಫಿಕ್ ನಲ್ಲಿ ರಾಜಭವನಕ್ಕೆ ಕರೆದು ತಂದು ಪ್ರಮಾಣ ವಚನ ಸ್ವೀಕರಿಸಲು ಅನುವು ಮಾಡಿಕೊಡಲಾಯಿತು.

ಮೊಟ್ಟೆ ಹಗರಣದಲ್ಲಿ ಸಿಲುಕಿಕೊಂಡಿರುವ ಜೊಲ್ಲೆ ಅವರಿಗೆ ಸಚಿವ ಸ್ಥಾನ ಕೈತಪ್ಪುವ ಎಲ್ಲ ಸಾಧ್ಯತೆಗಳಿತ್ತು. ಈ ಹಿನ್ನೆಲೆಯಲ್ಲಿ ಜೊಲ್ಲೆ ಅವರು ಪಕ್ಷದ ವರಿಷ್ಠರ ಮನವೊಲಿಸಲು ತನ್ನ ಪತಿ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರೊಂದಿಗೆ ದಿಲ್ಲಿಗೆ ತೆರಳಿದ್ದರು. ದಿಲ್ಲಿಯಿಂದ ಹಿಂತಿರುಗುವಾಗ ಕೊಂಚ ವಿಳಂಬವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮಾಣ ವಚನ ಸಮಾರಂಭವನ್ನು ಕೂಡ ಕೊಂಚ ವಿಳಂಬ ಮಾಡಲಾಗಿತ್ತು ಎನ್ನಲಾಗಿದೆ. ಆದರೂ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗಿತ್ತು.

ದಿಲ್ಲಿಯಿಂದ ವಿಶೇಷ ವಿಮಾನದಲ್ಲಿ  ಪತಿ ಅಣ್ಣಾ ಸಾಹೇಬ್ ಜೊಲ್ಲೆ ಅವರೊಂದಿಗೆ ಆಗಮಿಸಿದ ಶಶಿಕಲಾ ಜೊಲ್ಲೆ ಅವರನ್ನು ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಝಿರೋ ಟ್ರಾಫಿಕ್‍ನಲ್ಲಿ ರಾಜಭವನಕ್ಕೆ ಕರೆದು ತರಲಾಯಿತು. ಜೊಲ್ಲೆ ಅವರು ಕೊನೆಗೂ ಓಡೋಡಿ ಬಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು