4:55 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಮೊಟ್ಟೆಯಲ್ಲಿ ಕಮಿಷನ್ :  ಅಥಣಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಭಾರಿ ಪ್ರತಿಭಟನೆ

26/07/2021, 14:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಜನ ಪ್ರವಾಹ ಸಂಕಷ್ಟದಲ್ಲಿ ತತ್ತರಿಸಿ ಸಾವು ನೋವಿನ ನಡುವೆ ಇದ್ದರೆ ಬಿಜೆಪಿಯವರು ಅಪೌಷ್ಟಿಕ ಮಕ್ಕಳ ಹಾಗೂ ಗರ್ಭಿಣಿ ಹೆಣ್ಣು ಮಕ್ಕಳಿಗೆ ವಿತರಿಸ ಬೇಕಾದ ಆಹಾರಧಾನ್ಯ ಹಾಗೂ ಮೊಟ್ಟೆ ವಿತರಣೆಯಲ್ಲಿಯೂ ಕೂಡ ಹಣ ತಿನ್ನುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಆಪಾದಿಸಿದರು.


ಅವರು ಸೋಮವಾರ ಅಥಣಿ ಮಿನಿ ವಿಧಾನಸೌಧ ಅಥಣಿ ಆವರಣದಲ್ಲಿ ಅಥಣಿ ಹಾಗೂ ತೆಲಸಂಗ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಸರಬರಾಜು ಮಾಡಲು ಗುತ್ತಿಗೆದಾರರಿಂದ ಪ್ರತಿ ತಿಂಗಳು ಒಂದು ಕೋಟಿ ರೂಪಾಯಿ ಕಮಿಷನ್ ಗೆ ಬೇಡಿಕೆಯಿಟ್ಟ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ  ಶಶಿಕಲಾ ಜೊಲ್ಲೆಯವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ತಹಸಿಲ್ದಾರ್
ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಈ ಹಿಂದೆ ಪ್ರವಾಹ ಬಂದಾಗ ಮುಂಬೈಯಲ್ಲಿದ್ದ ಬಿಜೆಪಿ ಜನಪ್ರತಿನಿಧಿಗಳು ಈಗ ಮುಖ್ಯಮಂತ್ರಿ ಬದಲಾವಣೆ ವಿಷಯ ಹಿಡಿದು ರಾಜಕಾರಣ ಮಾಡ್ತಿದ್ದಾರೆ ಹೊರತು ಪ್ರವಾಹ ಪೀಡಿತ ಜನರತ್ತ ನೋಡ್ತಿಲ್ಲ. ಸಾಮಾನ್ಯ ಜನ ಅಷ್ಟೆ ಅಲ್ಲ ಬಿಜೆಪಿಯವರೆ ಭ್ರಷ್ಟ ಪಕ್ಷ ಎಂದು ಹೇಳ್ತಿದ್ದಾರೆ, ಬಡವರ ಹೊಟ್ಟೆಗೆ ಮತ್ತು ಮಕ್ಕಳಿಗೆ ಕೊಡಬೇಕಾದ ಆಹಾರಧಾನ್ಯದಲ್ಲಿ ಕನ್ನ ಹಾಕುವುದು ನಿಮಗೆ ನಾಚುಕೆ ಯಾಗುವುದಿಲ್ಲವೆ ಎಂದು ಶಶಿಕಲಾ ಜೊಲ್ಲೆ ಅವರನ್ನು ಉದ್ದೇಶಿಸಿ ಹೇಳಿದರು.

ಅಥಣಿ ಭಾಗ ಸುಮಾರು 22 ಹಳ್ಳಿಗಳು ಪ್ರವಾಹದಿಂದ ಬಾಧಿತವಾಗಿವೆ ಇದನ್ನು ಕೇಳದ ಸರಕಾರ ತಮ್ಮ ಹಗರಣದಲ್ಲಿ ತೊಡಗಿವೆ ಎಂದು ನುಡಿದರು.

ನಂತರ ಮಾತನಾಡಿದ ತೆಲಸಂಗ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಾಂತ ಪೂಜಾರಿ, ಇಡೀ ದೇಶದಲ್ಲಿ ಅತೀ ಭ್ರಷ್ಟ ಸರಕಾರ ಎಂದರೆ ಅದು ಬಿಜೆಪಿ ಪಕ್ಷ, ಅಪೌಷ್ಠಿಕ ಮಕ್ಕಳು ತಿನ್ನುವಂತಹ ಆಹಾರ ಧಾನದಲ್ಲಿಯೂ ಭ್ರಷ್ಟಾಚಾರ ಮಾಡಿ ಮೊಟ್ಟೆ ಕಮೀಷನ್ ಪಡೆಯುತ್ತಿರುವುದು ತೀರಾ ನಾಚಿಗೇಡಿತನ. ಇಂತಹ ಸಚಿವರನ್ನೂ ಯಡಿಯೂರಪ್ಪನವರು ಕೂಡಲೇ ವಜಾ ಗೊಳಿಸಿಬೇಕು ಎಂದು ಆಗ್ರಹಿಸಿದರು.

ನಂತರ ಅಥಣಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.


ಈ ವೇಳೆ ಎಸ್ ಕೆ ಬುಟಾಳಿ, ಬಸವರಾಜ ಬುಟಾಳಿ, ರಾವಸಾಬ ಐಹೊಳೆ, ಅನೀಲ ಸುಣಧೋಳಿ, ಸುನೀಲ ಸಂಕ,  ಶಿವಾನಂದ ಸಂಕ, ಅಸ್ಲಮ ನಾಲಬಂದ, ಬಸವರಾಜ ಠಕ್ಕಣ್ಣವರ, ರಾಜು ಜಮಖಂಡಿಕರ, ಗೌತಮ‌ ಪರಾಂಜಪೆ, ತೌಸಿಫ್ ಸಾಂಗಲೀಕರ್, ಪ್ರಕಾಶ ಕೋಳಿ, ಸುರೇಶ ಕೊಳಂಬಿ, ಚಿದಾನಂದ ಮುಕಣಿ, ಆಕಾಶ ಬುಟಾಳಿ, ಬಸವರಾಜ ಹಳ್ಳದಮಳ, ರವಿ ಬಕಾರಿ, ಸಿದ್ದು ಕೋಕಟನೂರ, ಸಚಿನ ಬುಟಾಳಿ, ರವಿ ಬಡಕಂಬಿ, ಸಚಿನ ಬಡಕಂಬಿ, ಸಲಾಂ ಕಲ್ಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು