3:54 PM Tuesday24 - September 2024
ಬ್ರೇಕಿಂಗ್ ನ್ಯೂಸ್
ಮಂಜಿನ ಮಧ್ಯೆ ಕಳೆದು ಹೋದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್: ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ… 2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!!

ಇತ್ತೀಚಿನ ಸುದ್ದಿ

ಮೊವಾಡಿ: ಸ್ನೇಹಿತರ ಜತೆ ಈಜುತ್ತಿದ್ದ ವೇಳೆ ನೀರು ಪಾಲಾದ ಯುವಕನ ಮೃತದೇಹ 2 ದಿನಗಳ ಬಳಿಕ ಪತ್ತೆ

21/09/2021, 18:20

ಕುಂದಾಪುರ(reporterkarnataka.com):  ಮೊವಾಡಿ‌ ಸೇತುವೆ ಬಳಿ‌ ನದಿಯಲ್ಲಿ ಸ್ನೇಹಿತನೊಂದಿಗೆ ಈಜುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ನದಿ ಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ. 

ತ್ರಾಸಿ  ಹೋಲಿಕ್ರಾಸ್  ಮಹೇಂದ್ರ (24) ನೀರುಪಾಲಾದ ಯುವಕ. ಸೌಪರ್ಣಿಕಾ ನದಿ ತೀರಕ್ಕೆ ಮಹೇಂದ್ರ, ಆಶಿಕ್ ಹಾಗೂ ಶರತ್ ತೆರಳಿದ್ದರು. ಮಹೇಂದ್ರ ಹಾಗೂ ಆಶಿಕ್ ನೀರಿಗೆ ಇಳಿದಿದ್ದು ಇನ್ನೋರ್ವ ಸ್ನೇಹಿತ ಶರತ್ ಸೇತುವೆ ಮೇಲೆ ನಿಂತು ವೀಕ್ಷಿಸುತ್ತಿದ್ದ. ಅದೇ ಸಂದರ್ಭದಲ್ಲಿ  ನೀರಿನ ಸೆಳೆತ ಹೆಚ್ಚಾಗುತಿತ್ತು. ಆಶಿಕ್ ನನ್ನು ಸ್ಥಳೀಯರಾದ ರತ್ನಾಕರ್ ಕಾಂಚನ್ ಮತ್ತು ಯೋಗೇಂದ್ರ ಕಾಂಚನ್ ರಕ್ಷಿಸಿದ್ದಾರೆ. ನೀರುಪಾಲಾದ ಯುವಕನಿಗಾಗಿ ಅಗ್ನಿ ಶಾಮಕ ಸಿಬ್ಬಂದಿ, ಸ್ಥಳಿಯರು ಹುಡುಕಾಟ ನಡೆಸಿದ್ದರು. ಸತತ ಎರಡೂ ದಿನಗಳಿಂದಲೂ ನೀರುಪಾಲಾದ ಯುವಕನ ಪತ್ತೆಗೆ ಶೋಧ ಕಾರ್ಯ ನಡೆಸಲಾಗಿತ್ತು. ಇದೀಗ ಮೃತದೇಹ ಪತ್ತೆಯಾಗಿದೆ.

ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು