1:38 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮೊವಾಡಿ: ಸ್ನೇಹಿತರ ಜತೆ ಈಜುತ್ತಿದ್ದ ವೇಳೆ ನೀರು ಪಾಲಾದ ಯುವಕನ ಮೃತದೇಹ 2 ದಿನಗಳ ಬಳಿಕ ಪತ್ತೆ

21/09/2021, 18:20

ಕುಂದಾಪುರ(reporterkarnataka.com):  ಮೊವಾಡಿ‌ ಸೇತುವೆ ಬಳಿ‌ ನದಿಯಲ್ಲಿ ಸ್ನೇಹಿತನೊಂದಿಗೆ ಈಜುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ನದಿ ಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ. 

ತ್ರಾಸಿ  ಹೋಲಿಕ್ರಾಸ್  ಮಹೇಂದ್ರ (24) ನೀರುಪಾಲಾದ ಯುವಕ. ಸೌಪರ್ಣಿಕಾ ನದಿ ತೀರಕ್ಕೆ ಮಹೇಂದ್ರ, ಆಶಿಕ್ ಹಾಗೂ ಶರತ್ ತೆರಳಿದ್ದರು. ಮಹೇಂದ್ರ ಹಾಗೂ ಆಶಿಕ್ ನೀರಿಗೆ ಇಳಿದಿದ್ದು ಇನ್ನೋರ್ವ ಸ್ನೇಹಿತ ಶರತ್ ಸೇತುವೆ ಮೇಲೆ ನಿಂತು ವೀಕ್ಷಿಸುತ್ತಿದ್ದ. ಅದೇ ಸಂದರ್ಭದಲ್ಲಿ  ನೀರಿನ ಸೆಳೆತ ಹೆಚ್ಚಾಗುತಿತ್ತು. ಆಶಿಕ್ ನನ್ನು ಸ್ಥಳೀಯರಾದ ರತ್ನಾಕರ್ ಕಾಂಚನ್ ಮತ್ತು ಯೋಗೇಂದ್ರ ಕಾಂಚನ್ ರಕ್ಷಿಸಿದ್ದಾರೆ. ನೀರುಪಾಲಾದ ಯುವಕನಿಗಾಗಿ ಅಗ್ನಿ ಶಾಮಕ ಸಿಬ್ಬಂದಿ, ಸ್ಥಳಿಯರು ಹುಡುಕಾಟ ನಡೆಸಿದ್ದರು. ಸತತ ಎರಡೂ ದಿನಗಳಿಂದಲೂ ನೀರುಪಾಲಾದ ಯುವಕನ ಪತ್ತೆಗೆ ಶೋಧ ಕಾರ್ಯ ನಡೆಸಲಾಗಿತ್ತು. ಇದೀಗ ಮೃತದೇಹ ಪತ್ತೆಯಾಗಿದೆ.

ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು