4:02 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮೊವಾಡಿ: ಸ್ನೇಹಿತರ ಜತೆ ಈಜುತ್ತಿದ್ದ ವೇಳೆ ನೀರು ಪಾಲಾದ ಯುವಕನ ಮೃತದೇಹ 2 ದಿನಗಳ ಬಳಿಕ ಪತ್ತೆ

21/09/2021, 18:20

ಕುಂದಾಪುರ(reporterkarnataka.com):  ಮೊವಾಡಿ‌ ಸೇತುವೆ ಬಳಿ‌ ನದಿಯಲ್ಲಿ ಸ್ನೇಹಿತನೊಂದಿಗೆ ಈಜುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ನದಿ ಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ. 

ತ್ರಾಸಿ  ಹೋಲಿಕ್ರಾಸ್  ಮಹೇಂದ್ರ (24) ನೀರುಪಾಲಾದ ಯುವಕ. ಸೌಪರ್ಣಿಕಾ ನದಿ ತೀರಕ್ಕೆ ಮಹೇಂದ್ರ, ಆಶಿಕ್ ಹಾಗೂ ಶರತ್ ತೆರಳಿದ್ದರು. ಮಹೇಂದ್ರ ಹಾಗೂ ಆಶಿಕ್ ನೀರಿಗೆ ಇಳಿದಿದ್ದು ಇನ್ನೋರ್ವ ಸ್ನೇಹಿತ ಶರತ್ ಸೇತುವೆ ಮೇಲೆ ನಿಂತು ವೀಕ್ಷಿಸುತ್ತಿದ್ದ. ಅದೇ ಸಂದರ್ಭದಲ್ಲಿ  ನೀರಿನ ಸೆಳೆತ ಹೆಚ್ಚಾಗುತಿತ್ತು. ಆಶಿಕ್ ನನ್ನು ಸ್ಥಳೀಯರಾದ ರತ್ನಾಕರ್ ಕಾಂಚನ್ ಮತ್ತು ಯೋಗೇಂದ್ರ ಕಾಂಚನ್ ರಕ್ಷಿಸಿದ್ದಾರೆ. ನೀರುಪಾಲಾದ ಯುವಕನಿಗಾಗಿ ಅಗ್ನಿ ಶಾಮಕ ಸಿಬ್ಬಂದಿ, ಸ್ಥಳಿಯರು ಹುಡುಕಾಟ ನಡೆಸಿದ್ದರು. ಸತತ ಎರಡೂ ದಿನಗಳಿಂದಲೂ ನೀರುಪಾಲಾದ ಯುವಕನ ಪತ್ತೆಗೆ ಶೋಧ ಕಾರ್ಯ ನಡೆಸಲಾಗಿತ್ತು. ಇದೀಗ ಮೃತದೇಹ ಪತ್ತೆಯಾಗಿದೆ.

ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು