2:47 AM Wednesday2 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳ: ಕಡಲನಗರಿಯಲ್ಲಿ ಪೂರ್ವಭಾವಿ ಸಭೆ

05/11/2024, 20:33

ಮಂಗಳೂರು(reporterkarnataka.com): ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ನಡೆಯಲಿರುವ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆ ನಗರದ ಪತ್ತುಮುಡಿ ಸೌಧದಲ್ಲಿ ನಡೆಯಿತು.
ಸಭೆಯನ್ನು ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷರೂ ಆದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಸಂಸದರು, ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳಕ್ಕೆ ಉತ್ತಮ ಜನಮನ್ನಣೆ ಸಿಗುತ್ತಿದ್ದು, ಇದು ಕರಾವಳಿಯ ಪ್ರವಾಸೋಧ್ಯಮಕ್ಕೆ ಮೈಲುಗಲ್ಲಾಗಲಿದೆ ಎಂದರು.
ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಕೆಲಸವನ್ನು ಯುವಕರು ಮಾಡಬೇಕು.
ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ನುಡಿದರು.
ಜಿಲ್ಲಾ ಕಂಬಳ ಸಮಿತಿಯ ವಿಜಯ ಕುಮಾರ್ ಕಂಗಿನಮನೆ ಮಾತನಾಡಿ, ಮಂಗಳೂರಿನಲ್ಲಿ ನಡೆಯುವ ಕಂಬಳ ಜನ ಆಕರ್ಷಣೀಯ ಕೇಂದ್ರವಾಗುತ್ತಿದ್ದು, ಕಂಬಳಕ್ಕೆ ಇನ್ನಷ್ಟು ಮೆರೆಗು ನೀಡುವ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಸರ್ವ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.
ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಅವರು ಕಂಬಳ ಈ ಮಣ್ಣಿನ ಅಸ್ಮಿತೆ, ಅದನ್ನು ಮುಂದುವರಿಸಿಕೊಂಡು ಹೋಗಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಮಂಗಳೂರು ಕಂಬಳ ಮೇಲ್ಪಂಕ್ತಿಯಾಗಿದೆ ಎಂದರು.


ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪಿ.ಆರ್. ಶೆಟ್ಟಿ, ಸುಧಾಕರ ಶೆಟ್ಟಿ ಮುಗರೋಡಿ,ಕಂಬಳ ಸಮಿತಿ ಉಪಾಧ್ಯಕ್ಷರಾದ ಕಿರಣ್ ಕುಮಾರ್,ಅನಿಲ್ ಕುಮಾರ್, ಮಂಗಳೂರು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಕಂಬಳ ಸಮಿತಿಯ ಕೋಶಾಧಿಕಾರಿ ಪ್ರೀತಮ್ ರೈ ಉಪಸ್ಥಿತರಿದ್ದರು. ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ಸ್ವಾಗತಿಸಿದರು.
ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಗರೋಡಿ ವಂದಿಸಿದರು, ಕಾರ್ಯದರ್ಶಿ ಮನ್ಮತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು