12:10 PM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂಪಿ ಅನುದಾನಡಿ ಮೊದಲ ಕಾಮಗಾರಿಗೆ ಚಾಲನೆ

13/01/2025, 20:25

ಮಂಗಳೂರು(reporterkarnataka.com): ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸೋಮವಾರ ಚಾಲನೆ ನೀಡಿದ್ದಾರೆ.


ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಅಂದಾಜು 5 ಲಕ್ಷ ರೂ. ವೆಚ್ಚದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಕಸಬಾ ಪರ್ಲಡ್ಕ ಸರ್ಕಾರಿ ಕಾಂಪೌಂಡ್‌ ಒಳಗಿರುವ ತೋಡಿಗೆ ಚರಂಡಿ ವ್ಯವಸ್ಥೆ ಹಾಗೂ ಸ್ಲ್ಯಾಬ್ ನಿರ್ಮಾಣ ಕಾರ್ಯ ನಡೆಯಲಿದ್ದು, ಸಂಸದ ಕ್ಯಾ. ಚೌಟ ಅವರು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇದರ ಜತೆಗೆ ಪುತ್ತೂರು ಕಸಬಾ ದರ್ಬೆಯ ಆಫಿಸರ್ಸ್ ಕ್ಲಬ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು ಸಂಸದರ ನಿಧಿಯಡಿ 5 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟಿಕರಣ ಕಾಮಗಾರಿಗೂ ಶಂಕುಸ್ಥಾಪನೆ ನೆರವೇರಿಸಲಾಯಿತು.
ಕ್ಯಾ. ಬ್ರಿಜೇಶ್ ಚೌಟ ಅವರು ಸಂಸದರಾದ ಬಳಿಕ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಬಿಡುಗಡೆ ಮಾಡಲಾದ ವಿವಿಧ ಅನುದಾನದ ಅಭಿವೃದ್ಧಿ ಕಾಮಗಾರಿ ಇದಾಗಿದೆ. ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಂಸದ ಕ್ಯಾ. ಚೌಟ ಅವರು,ನಮ್ಮ ಕ್ಷೇತ್ರದ ಜನತೆಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ನಾನು ಪ್ರಾಮಾಣಿಕವಾಗಿ ದಣಿವರಿಯದೇ ಕೆಲಸ ಮಾಡುತ್ತೇನೆ. ನಮ್ಮ ಕ್ಷೇತ್ರದ ಸಮಗ್ರ ಅಭಿವೃದ್ದಿಯೇ ನನ್ನ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.
ಈ ವೇಳೆ ಡಾ. ಸುರೇಶ್ ಪುತ್ತೂರಾಯ, ಬಿಜೆಪಿ ಪುತ್ತೂರು ನಗರ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪುತ್ತೂರು ನಗರಸಭೆ ಅಧ್ಯಕ್ಷ ಲೀಲಾವತಿ ಅಣ್ಣು ನಾಯ್ಕ್, ಉಪಾಧ್ಯಕ್ಷ ಬಾಲಚಂದ್ರ, ಚಂದ್ರಶೇಖರ ರಾವ್ ಬಪ್ಪಳಿಗೆ, ಚನಿಲ ತಿಮ್ಮಪ್ಪ ಶೆಟ್ಟಿ, ರಾಧಾಕೃಷ್ಣ ಆಳ್ವ, ಜಗನ್ನಿವಾಸ ರಾವ್, ಡಾ. ಮಂಜುನಾಥ್ ಶೆಟ್ಟಿ, ಪ್ರಸನ್ನ ಮಾರ್ತ, ವಿಕಾಸ್ ಪುತ್ತೂರು, ಶಶಿಧರ್ ನಾಯ್ಕ್, ಸಂತೋಷ್ ರೈ ಕೈಕಾರ, ಶಶಿಧರ್ ನಾಯಕ್, ನಾಗೇಶ್ ಪ್ರಭು, ಹರಿಪ್ರಸಾದ್ ಯಾದವ್, ಹರಿಪ್ರಸಾದ್ ಪೆರಿಯತತೋಡಿ, ವಿದ್ಯಾಧರ್ ಜೈನ್, ನಿತೀಶ್ ಶಾಂತಿವನ, ಪುನೀತ್ ಮಾಡತ್ತಾರ್, ನಿತೇಶ್ ಕಲ್ಲೇಗ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು