10:04 PM Friday9 - May 2025
ಬ್ರೇಕಿಂಗ್ ನ್ಯೂಸ್
Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ…

ಇತ್ತೀಚಿನ ಸುದ್ದಿ

ಮೃತ ಕಾರ್ಮಿಕ ಕುಟುಂಬಕ್ಕೆ 2 ಲಕ್ಷ ಪರಿಹಾರ ಕೊಡಿ: ಸಿಐಟಿಯು ಕಾರ್ಯದರ್ಶಿ ಗುನ್ನಳ್ಳಿ ರಾಘವೇಂದ್ರ ಆಗ್ರಹ

23/10/2021, 10:29

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಕಾರ್ಮಿಕ ಕಾರ್ಡ್ ಫಲಾನುಭವಿ ಹಾಗೂ ಕಟ್ಟಡ ಕಾರ್ಮಿಕರು ಮೃತಪಟ್ಟಾಗ ಸರ್ಕಾರ, ಇಲಾಖೆಯ ಮೂಲಕ ಮೃತ ಕಾರ್ಮಿಕ ಕುಟುಂಬಕ್ಕೆ ಅಂತ್ಯ ಸಂಸ್ಕಾರ ಹಾಗೂ ಅನುಗ್ರಹ ರಾಶಿ ವೆಚ್ಚಕ್ಕೆಂದು ಒಟ್ಟು 54 ಸಾವಿರಗಳನ್ನು ಮಂಜೂರು ಮಾಡುತ್ತಿದೆ. ಬೆಲೆ ಏರಿಕೆ ಹಿನ್ನಲೆಯಲ್ಲಿ ಅದು ನೊಂದ ಹಾಗೂ ಸಂಕಷ್ಟದಲ್ಲಿರುವ ಕುಟುಂಬಕ್ಕೆ, ಯಾವುದೇ ರೀತಿಯಲ್ಲಿ ಕಾಯಂ ನೆರವಿಗೆ ಸಹಕಾರಿಯಾಗಲಾರದು. ಕಾರಣ ಸರ್ಕಾರ ಮೃತ ಕಾರ್ಮಿಕ ಕುಟುಂಬಕ್ಕೆ ತಲಾ 2 ಲಕ್ಷಕ್ಕೂ ಹೆಚ್ಚು ಹಣ ಮಂಜೂರು ಮಾಡಬೇಕೆಂದು ಸಿಐಟಯು ಕಾರ್ಯದರ್ಶಿ ಹಾಗೂ ಕಾರ್ಮಿಕ ಮುಖಂಡ ಗುನ್ನಳ್ಳಿ ರಾಘವೇಂದ್ರ ಒತ್ತಾಯಿಸಿದ್ದಾರೆ.

ಅವರು ಹಲವು ದಿನಗಳ ಹಿಂದೆಯಷ್ಟೆ ಮೃತಪಟ್ಟಿದ್ದ,ಕೂಡ್ಲಿಗಿ ತಾಲೂಕು ಬಂಡೇ ಬಸಾಪುರ ತಾಂಡ ನಿವಾಸಿ ಹಾಗೂ ಕಟ್ಟಡ ಕಾರ್ಮಿಕ ತಾವರೆನಾಯ್ಕ ಕುಟುಂಬಕ್ಕೆ. ಸರ್ಕಾರ ಕಾರ್ಮಿಕ ಇಲಾಖೆಯಿಂದ ನೀಡಲ್ಪಟ್ಟಿರುವ 54 ಸಾವಿರ ಹಣವನ್ನು ಮಂಜೂರು ಮಾಡಿದ್ದು, ಕಾರ್ಮಿಕ ಸಂಘಟನೆ ಯ ಕಚೇರಿಯಲ್ಲಿ ಲಭ್ಯವಾದ ಪರಿಹಾರ ಹಣ ಮಂಜೂರು ಆಗಿರುವ ಪತ್ರವನ್ನು.ಪಟ್ಟಣದ ಶ್ರೀಕೊತ್ತಲಾಂಜನೇಯ ದೇವಸ್ಥಾನದ ಹತ್ತಿರವಿರುವ, ಸಿಐಟಿಯು ಹಾಗೂ ಕಟ್ಟಡ ಕಾರ್ಮಿಕ ಸಂಘದ ಕಚೇರಿಯಲ್ಲಿ ಬಿಬಿ ತಾಂಡದ ಲಕ್ಷ್ಮೀಬಾಯಿ ತಾವರೆ ನಾಯ್ಕರವರಿಗೆ, ಕಾರ್ಮಿಕ ಇಲಾಖೆಯಿಂದ ನೀಡಲ್ಪಡುವ ಹಣ ಮಂಜೂರಾತಿ ಪತ್ರ ನೀಡಿ ಮಾತನಾಡಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬೆಲೆಯೇರಿಕೆ ನೀತಿ ಕಾರ್ಮಿಕರಿಗೆ ಹಾಗೂ ರೈತರಿಗೆ ಮಾರಕವಾಗಿದ್ದು, ಕಾರ್ಮಿಕರಿಗೆ ಕಿಟ್ಟು ಕೊಡೋ ನೆಪದಲ್ಲಿ ಸರ್ಕಾರಗಳಿಂದ ಕಾರ್ಮಿಕರ ಹಣವನ್ನು ಲೂಟಿ ಹೊಡೆಯುವ ಹುನ್ನಾರ ನಡೆಸಲಾಗಿದೆ. ಕೋವಿಡ್ ಹಣ ಸಮರ್ಪಕವಾಗಿ ಒದಗಿಸಿಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡಿಲ್ಲ, ನೊಂದ ಅರ್ಹ ಫಲಾನುಭವಿಗಳಿಗೆ ಯೋಗ್ಯ ಪರಿಹಾರ ಹಣ ನೀಡುತ್ತಿಲ್ಲ, ಕಾರ್ಮಿಕರ ಹಣದಲ್ಲಿ ಆಡಳಿತ ನಡೆಸುವ ಸರ್ಕಾರಗಳು, ಕಾರ್ಮಿಕರ ಕಣ್ಣೀರೊರವಸುವುದನ್ನು ಬಿಟ್ಟು ಅವೈಜ್ಞಾನಿಕ ನೀತಿಯ ಮಾನದಂಡದಂತೆ ಪರಿಹಾರ ನೀಡಲಾಗುತ್ತಿದೆ. ಇದು ಸರ್ಕಾರ ಕಾರ್ಮಿಕರ  ಮೂಗಿಗೆ ತುಪ್ಪ ಸವರುವ ಕಾರ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶೀಘ್ರವೇ ಸರ್ಕಾರ  ಪರಿಹಾರ ಹಣ ಹೆಚ್ಚಿಸಬೇಕು ಹಾಗೂ ಸೌಲಭ್ಯಗಳನ್ನು ತುರ್ತಾಗಿ ಒದಗಿಸಬೇಕಿದೆ ಎಂದು, ಗುನ್ನಳ್ಳಿ ರಾಘವೇಂದ್ರ ಸರ್ಕಾರಗಳಿಗೆ ಈ ಮೂಲಕ ಒತ್ತಾಯಿಸಿದರು.ಕಾರ್ಮಿಕ ಮುಖಂಡರು ಹಾಗೂ ಕಾರ್ಮಿಕ ಸಂಘದ ಪದಾಧಿಕಾರಿಗಳು ಇದ್ದರು.

 ವಿ.ಜಿ.ವೃಷಭೇಂದ್ರ ಕೂಡ್ಲಿಗಿ

ಇತ್ತೀಚಿನ ಸುದ್ದಿ

ಜಾಹೀರಾತು