2:24 AM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಎಂಆರ್ ಪಿಎಲ್ 4ನೇ ಹಂತದ ಭೂಸ್ವಾಧೀನ: ನಿರ್ವಸಿತರಿಗೆ ನ್ಯಾಯೋಚಿತ ಪರಿಹಾರ, ಉದ್ಯೋಗಾವಕಾಶಕ್ಕೆ ಜಿಲ್ಲಾಧಿಕಾರಿಗೆ ಮನವಿ

12/10/2022, 10:13

ಮಂಗಳೂರು(reporterkarnataka.com): ಎಂಆರ್ ಪಿ ಎಲ್ 4ನೇ ಹಂತದ ಭೂಸ್ವಾಧೀನ ಸಂದರ್ಭ ನಿರ್ವಸಿತರಾಗುವ ಕುಟುಂಬಗಳಿಗೆ
ಪ್ರಧಾನ ಆದ್ಯತೆಯನ್ನು ನೀಡಿ ನ್ಯಾಯೋಚಿತ ಪರಿಹಾರಗಳನ್ನು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರಿಗೆ ನಾಲ್ಕನೇ ಹಂತದ ಎಂ ಆರ್ ಪಿ ಎಲ್ ಭೂ ನಿರ್ವಸಿತರ ಹಿತರಕ್ಷಣ ಸಮಿತಿ ಒತ್ತಾಯಿಸಿತು.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೂಮಿಯನ್ನು ಕಳೆದುಕೊಳ್ಳುತ್ತಿರುವ ಕುಟುಂಬದ ಜೊತೆ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹಾಗೂ ಉಮಾನಾಥ ಕೋಟ್ಯಾನ್ ಅವರ ಮುಂದಾಳತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಬೇಡಿಕೆ ಬಗ್ಗೆ ಚರ್ಚಿಸಲಾಯಿತು.

ಭೂಮಿಯನ್ನ ಕಳೆದುಕೊಳ್ಳುತ್ತಿರುವ ರೈತ ಮುಖಂಡರ ಜೊತೆ ಹಾಗೂ ನಾಲ್ಕನೇ ಹಂತದ ಎಂ ಆರ್ ಪಿ ಎಲ್ ಭೂಸ್ವಾಧೀನ ನಿರ್ವಸಿತರ ಸಮಿತಿಯ ಮುಖಂಡರ ಜೊತೆ ಅವರ ಅಹವಾಲುಗಳನ್ನು ಆಲಿಸಿದರು.
ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಮಾತನಾಡಿ, ಈ ಹಿಂದೆ ಪುನರ್ ವಸತಿ ಕಾಲನಿಯಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಈ ಬಾರಿ ಅಂತಹ ಸಮಸ್ಯೆಯನ್ನು ನಿರ್ವಸಿತರು ಎದುರಿಸದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ನಿರ್ವಸಿತ ಕುಟುಂಬಕ್ಕೆ ಉದ್ಯೋಗಕ್ಕೆ ಪ್ರಾಮುಖ್ಯತೆ ನೀಡುವಂತೆ ಸಲಹೆ ನೀಡಿದರು.

ಶಾಸಕ ಉಮಾನಾಥ ಕೋಟ್ಯಾನ್ , ಹಿತ ರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಜೋಕಿಂ ಐವನ್ ಡೋನಿ ಸುವಾರೀಸ್, ಭೋಜರಾಜ್ ಸೂರಿಂಜೆ,ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ, ಉಪಾಧ್ಯಕ್ಷರಾದ ಜಿ.ಕೆ ಪೂವಪ್ಪ, ಹೆನ್ರಿ ಫೆರ್ನಾಂಡಿಸ್, ಪ್ರಧಾನ ಕಾರ್ಯದರ್ಶಿ ಕೇಶವ ಶೆಟ್ಟಿ, ಕಾರ್ಯದರ್ಶಿ ಹೇಮನಾಥ್, ಕೋಶಾಧಿಕಾರಿ ಕುಸುಮಾಕರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಸುರೇಶ್ ರಾಮ,ಕೃಷ್ಣಮೂರ್ತಿ, ಸಂಚಾಲಕ ಸ್ಟಾನಿ ಫೆರ್ನಾಂಡಿಸ್ , ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು