12:28 AM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಎಂಆರ್ ಪಿಎಲ್ 4ನೇ ಹಂತದ ಭೂಸ್ವಾಧೀನ: ನಿರ್ವಸಿತರಿಗೆ ನ್ಯಾಯೋಚಿತ ಪರಿಹಾರ, ಉದ್ಯೋಗಾವಕಾಶಕ್ಕೆ ಜಿಲ್ಲಾಧಿಕಾರಿಗೆ ಮನವಿ

12/10/2022, 10:13

ಮಂಗಳೂರು(reporterkarnataka.com): ಎಂಆರ್ ಪಿ ಎಲ್ 4ನೇ ಹಂತದ ಭೂಸ್ವಾಧೀನ ಸಂದರ್ಭ ನಿರ್ವಸಿತರಾಗುವ ಕುಟುಂಬಗಳಿಗೆ
ಪ್ರಧಾನ ಆದ್ಯತೆಯನ್ನು ನೀಡಿ ನ್ಯಾಯೋಚಿತ ಪರಿಹಾರಗಳನ್ನು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರಿಗೆ ನಾಲ್ಕನೇ ಹಂತದ ಎಂ ಆರ್ ಪಿ ಎಲ್ ಭೂ ನಿರ್ವಸಿತರ ಹಿತರಕ್ಷಣ ಸಮಿತಿ ಒತ್ತಾಯಿಸಿತು.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೂಮಿಯನ್ನು ಕಳೆದುಕೊಳ್ಳುತ್ತಿರುವ ಕುಟುಂಬದ ಜೊತೆ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹಾಗೂ ಉಮಾನಾಥ ಕೋಟ್ಯಾನ್ ಅವರ ಮುಂದಾಳತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಬೇಡಿಕೆ ಬಗ್ಗೆ ಚರ್ಚಿಸಲಾಯಿತು.

ಭೂಮಿಯನ್ನ ಕಳೆದುಕೊಳ್ಳುತ್ತಿರುವ ರೈತ ಮುಖಂಡರ ಜೊತೆ ಹಾಗೂ ನಾಲ್ಕನೇ ಹಂತದ ಎಂ ಆರ್ ಪಿ ಎಲ್ ಭೂಸ್ವಾಧೀನ ನಿರ್ವಸಿತರ ಸಮಿತಿಯ ಮುಖಂಡರ ಜೊತೆ ಅವರ ಅಹವಾಲುಗಳನ್ನು ಆಲಿಸಿದರು.
ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಮಾತನಾಡಿ, ಈ ಹಿಂದೆ ಪುನರ್ ವಸತಿ ಕಾಲನಿಯಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಈ ಬಾರಿ ಅಂತಹ ಸಮಸ್ಯೆಯನ್ನು ನಿರ್ವಸಿತರು ಎದುರಿಸದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ನಿರ್ವಸಿತ ಕುಟುಂಬಕ್ಕೆ ಉದ್ಯೋಗಕ್ಕೆ ಪ್ರಾಮುಖ್ಯತೆ ನೀಡುವಂತೆ ಸಲಹೆ ನೀಡಿದರು.

ಶಾಸಕ ಉಮಾನಾಥ ಕೋಟ್ಯಾನ್ , ಹಿತ ರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಜೋಕಿಂ ಐವನ್ ಡೋನಿ ಸುವಾರೀಸ್, ಭೋಜರಾಜ್ ಸೂರಿಂಜೆ,ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ, ಉಪಾಧ್ಯಕ್ಷರಾದ ಜಿ.ಕೆ ಪೂವಪ್ಪ, ಹೆನ್ರಿ ಫೆರ್ನಾಂಡಿಸ್, ಪ್ರಧಾನ ಕಾರ್ಯದರ್ಶಿ ಕೇಶವ ಶೆಟ್ಟಿ, ಕಾರ್ಯದರ್ಶಿ ಹೇಮನಾಥ್, ಕೋಶಾಧಿಕಾರಿ ಕುಸುಮಾಕರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಸುರೇಶ್ ರಾಮ,ಕೃಷ್ಣಮೂರ್ತಿ, ಸಂಚಾಲಕ ಸ್ಟಾನಿ ಫೆರ್ನಾಂಡಿಸ್ , ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು