12:39 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಎಂಆರ್ ಪಿಎಲ್ 4ನೇ ಹಂತದ ಭೂಸ್ವಾಧೀನ: ನಿರ್ವಸಿತರಿಗೆ ನ್ಯಾಯೋಚಿತ ಪರಿಹಾರ, ಉದ್ಯೋಗಾವಕಾಶಕ್ಕೆ ಜಿಲ್ಲಾಧಿಕಾರಿಗೆ ಮನವಿ

12/10/2022, 10:13

ಮಂಗಳೂರು(reporterkarnataka.com): ಎಂಆರ್ ಪಿ ಎಲ್ 4ನೇ ಹಂತದ ಭೂಸ್ವಾಧೀನ ಸಂದರ್ಭ ನಿರ್ವಸಿತರಾಗುವ ಕುಟುಂಬಗಳಿಗೆ
ಪ್ರಧಾನ ಆದ್ಯತೆಯನ್ನು ನೀಡಿ ನ್ಯಾಯೋಚಿತ ಪರಿಹಾರಗಳನ್ನು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರಿಗೆ ನಾಲ್ಕನೇ ಹಂತದ ಎಂ ಆರ್ ಪಿ ಎಲ್ ಭೂ ನಿರ್ವಸಿತರ ಹಿತರಕ್ಷಣ ಸಮಿತಿ ಒತ್ತಾಯಿಸಿತು.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೂಮಿಯನ್ನು ಕಳೆದುಕೊಳ್ಳುತ್ತಿರುವ ಕುಟುಂಬದ ಜೊತೆ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹಾಗೂ ಉಮಾನಾಥ ಕೋಟ್ಯಾನ್ ಅವರ ಮುಂದಾಳತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಬೇಡಿಕೆ ಬಗ್ಗೆ ಚರ್ಚಿಸಲಾಯಿತು.

ಭೂಮಿಯನ್ನ ಕಳೆದುಕೊಳ್ಳುತ್ತಿರುವ ರೈತ ಮುಖಂಡರ ಜೊತೆ ಹಾಗೂ ನಾಲ್ಕನೇ ಹಂತದ ಎಂ ಆರ್ ಪಿ ಎಲ್ ಭೂಸ್ವಾಧೀನ ನಿರ್ವಸಿತರ ಸಮಿತಿಯ ಮುಖಂಡರ ಜೊತೆ ಅವರ ಅಹವಾಲುಗಳನ್ನು ಆಲಿಸಿದರು.
ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಮಾತನಾಡಿ, ಈ ಹಿಂದೆ ಪುನರ್ ವಸತಿ ಕಾಲನಿಯಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಈ ಬಾರಿ ಅಂತಹ ಸಮಸ್ಯೆಯನ್ನು ನಿರ್ವಸಿತರು ಎದುರಿಸದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ನಿರ್ವಸಿತ ಕುಟುಂಬಕ್ಕೆ ಉದ್ಯೋಗಕ್ಕೆ ಪ್ರಾಮುಖ್ಯತೆ ನೀಡುವಂತೆ ಸಲಹೆ ನೀಡಿದರು.

ಶಾಸಕ ಉಮಾನಾಥ ಕೋಟ್ಯಾನ್ , ಹಿತ ರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಜೋಕಿಂ ಐವನ್ ಡೋನಿ ಸುವಾರೀಸ್, ಭೋಜರಾಜ್ ಸೂರಿಂಜೆ,ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ, ಉಪಾಧ್ಯಕ್ಷರಾದ ಜಿ.ಕೆ ಪೂವಪ್ಪ, ಹೆನ್ರಿ ಫೆರ್ನಾಂಡಿಸ್, ಪ್ರಧಾನ ಕಾರ್ಯದರ್ಶಿ ಕೇಶವ ಶೆಟ್ಟಿ, ಕಾರ್ಯದರ್ಶಿ ಹೇಮನಾಥ್, ಕೋಶಾಧಿಕಾರಿ ಕುಸುಮಾಕರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಸುರೇಶ್ ರಾಮ,ಕೃಷ್ಣಮೂರ್ತಿ, ಸಂಚಾಲಕ ಸ್ಟಾನಿ ಫೆರ್ನಾಂಡಿಸ್ , ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು