12:00 PM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಎಂಆರ್ ಪಿಎಲ್ 4ನೇ ಹಂತದ ಭೂಸ್ವಾಧೀನ: ನಿರ್ವಸಿತರಿಗೆ ನ್ಯಾಯೋಚಿತ ಪರಿಹಾರ, ಉದ್ಯೋಗಾವಕಾಶಕ್ಕೆ ಜಿಲ್ಲಾಧಿಕಾರಿಗೆ ಮನವಿ

12/10/2022, 10:13

ಮಂಗಳೂರು(reporterkarnataka.com): ಎಂಆರ್ ಪಿ ಎಲ್ 4ನೇ ಹಂತದ ಭೂಸ್ವಾಧೀನ ಸಂದರ್ಭ ನಿರ್ವಸಿತರಾಗುವ ಕುಟುಂಬಗಳಿಗೆ
ಪ್ರಧಾನ ಆದ್ಯತೆಯನ್ನು ನೀಡಿ ನ್ಯಾಯೋಚಿತ ಪರಿಹಾರಗಳನ್ನು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರಿಗೆ ನಾಲ್ಕನೇ ಹಂತದ ಎಂ ಆರ್ ಪಿ ಎಲ್ ಭೂ ನಿರ್ವಸಿತರ ಹಿತರಕ್ಷಣ ಸಮಿತಿ ಒತ್ತಾಯಿಸಿತು.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೂಮಿಯನ್ನು ಕಳೆದುಕೊಳ್ಳುತ್ತಿರುವ ಕುಟುಂಬದ ಜೊತೆ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹಾಗೂ ಉಮಾನಾಥ ಕೋಟ್ಯಾನ್ ಅವರ ಮುಂದಾಳತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಬೇಡಿಕೆ ಬಗ್ಗೆ ಚರ್ಚಿಸಲಾಯಿತು.

ಭೂಮಿಯನ್ನ ಕಳೆದುಕೊಳ್ಳುತ್ತಿರುವ ರೈತ ಮುಖಂಡರ ಜೊತೆ ಹಾಗೂ ನಾಲ್ಕನೇ ಹಂತದ ಎಂ ಆರ್ ಪಿ ಎಲ್ ಭೂಸ್ವಾಧೀನ ನಿರ್ವಸಿತರ ಸಮಿತಿಯ ಮುಖಂಡರ ಜೊತೆ ಅವರ ಅಹವಾಲುಗಳನ್ನು ಆಲಿಸಿದರು.
ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಮಾತನಾಡಿ, ಈ ಹಿಂದೆ ಪುನರ್ ವಸತಿ ಕಾಲನಿಯಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಈ ಬಾರಿ ಅಂತಹ ಸಮಸ್ಯೆಯನ್ನು ನಿರ್ವಸಿತರು ಎದುರಿಸದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ನಿರ್ವಸಿತ ಕುಟುಂಬಕ್ಕೆ ಉದ್ಯೋಗಕ್ಕೆ ಪ್ರಾಮುಖ್ಯತೆ ನೀಡುವಂತೆ ಸಲಹೆ ನೀಡಿದರು.

ಶಾಸಕ ಉಮಾನಾಥ ಕೋಟ್ಯಾನ್ , ಹಿತ ರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಜೋಕಿಂ ಐವನ್ ಡೋನಿ ಸುವಾರೀಸ್, ಭೋಜರಾಜ್ ಸೂರಿಂಜೆ,ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ, ಉಪಾಧ್ಯಕ್ಷರಾದ ಜಿ.ಕೆ ಪೂವಪ್ಪ, ಹೆನ್ರಿ ಫೆರ್ನಾಂಡಿಸ್, ಪ್ರಧಾನ ಕಾರ್ಯದರ್ಶಿ ಕೇಶವ ಶೆಟ್ಟಿ, ಕಾರ್ಯದರ್ಶಿ ಹೇಮನಾಥ್, ಕೋಶಾಧಿಕಾರಿ ಕುಸುಮಾಕರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಸುರೇಶ್ ರಾಮ,ಕೃಷ್ಣಮೂರ್ತಿ, ಸಂಚಾಲಕ ಸ್ಟಾನಿ ಫೆರ್ನಾಂಡಿಸ್ , ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು