7:32 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಎಂಆರ್‍ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಿಟೀಕರಣ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

04/02/2025, 00:04

ಸುರತ್ಕಲ್(reporterkarnataka.com): ಸುರತ್ಕಲ್ ಎಂಆರ್‍ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆಯನ್ನು ಮಂಗಳೂರು ಮಹಾನಗರ ಪಾಲಿಕೆ ನಿಧಿ 78 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರಿಟ್ ಕಾಮಗಾರಿ ನಡೆಸು ಸುಸಜ್ಜಿತ ರಸ್ತೆಯನ್ನಾಗಿ ಪರಿವರ್ತಿಸಲಾಗಿದ್ದು ಸೋಮವಾರ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ರೈಲ್ವೆ ಇಲಾಖೆಯ ಆಧೀನದಲ್ಲಿರುವ ಸೇತುವೆಯಾದರೂ ಜನರ ಹಿತದೃಷ್ಠಿಯಿಂದ ಎನ್‍ಒಸಿ ಪಡೆದು ಕಾಂಕ್ರಿಟ್ ಮಾಡಲಾಗಿದೆ.
ರೈಲ್ವೆ ಮೇಲ್ಸೇತುವೆಯನ್ನು ಚತುಷ್ಪಥ ಮಾಡುವ ಅಗತ್ಯವಿದ್ದು ಜಾಗ ಗುರುತಿಸಿ ಹೆಚ್ಚುವರಿ ಕಾಂಕ್ರಿಟ್ ಮಾಡಲಾಗಿದೆ. ಸಂಸದರಾದ ಬೃಜೇಶ್ ಚೌಟ ಹಾಗೂ ರೈಲ್ವೆ ಸಚಿವ ಸೋಮಣ್ಣ ಅವರಲ್ಲಿ ಪ್ರಸ್ತಾವನೆ ಇರಿಸಲಾಗಿದ್ದು ಭವಿಷ್ಯದಲ್ಲಿ ಅನುದಾನ ದೊರಕುವ ಭರವಸೆಯಿದೆ ಎಂದರು. ಹಂಪ್ಸ್ ಆಳವಡಿಸಿ ವೇಗ ನಿಯಂತ್ರಣಕ್ಕೆ ಒತ್ತು ನೀಡಲಾಗಿದೆ ಎಂದರು.
ರಸ್ತೆಯನ್ನು ಅವಧಿಗಿಂತ ಮುಂಚಿತವಾಗಿ ತ್ವರಿತವಾಗಿ ನಿರ್ಮಿಸಲು ಸಹಕರಿಸಿದ ಪಾಲಿಕೆ ಎಂಜಿನಿಯರ್ ಕಾರ್ತಿಕ್ ಶೆಟ್ಟಿ ,ಗುತ್ತಿಗೆದಾರರಾದ ಸುಧಾಕರ ಪೂಂಜಾ,ಮನಪಾ ಸದಸ್ಯರನ್ನು ಹಾಗೂ ಸುಮಾರು ಒಂದು ತಿಂಗಳ ಕಾಲ ಸಂಚಾರದಲ್ಲಿ ಸಹಕರಿಸಿದ ವಾಹನ ಚಾಲಕರು,ಸ್ಥಳೀಯರನ್ನು ಶಾಸಕರು ಶ್ಲಾಘಿಸಿದರು.
ಶಾಸಕರು ಹೊಸ ರಸ್ತೆಯಲ್ಲಿ ಆಟೋ ರಿಕ್ಷಾ ಸ್ವತಃ ಚಲಾಯಿಸಿ ಹೊಸ ರಸ್ತೆಯಲ್ಲಿ ಸುರಕ್ಷತೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.


ಮೇಯರ್ ಮನೋಜ್ ಕುಮಾರ್ ಮಾತನಾಡಿ ಶಾಸಕರ ನೆರವಿನೊಂದಿಗೆ ಇಲ್ಲಿನ ಸೇತುವೆ ಕಾಂಕ್ರಿಟ್ ಮಾಡಲಾಗಿದ್ದು ಮೂಲಸೌಕರ್ಯಗಳಿಗೆ ಒತ್ತು ನೀಡಲಾಗಿದೆ ಎಂದರು. ಉಪಮೇಯರ್ ಬಾನುಮತಿ, ಸ್ಥಳೀಯ ಮನಪಾ ಸದಸ್ಯರಾದ ಸರಿತಶಶಿಧರ್, ವರುಣ್ ಚೌಟ, ಲೋಕೇಶ್ ಬೊಳ್ಳಾಜೆ,ನಯನ ಆರ್.ಕೋಟ್ಯಾನ್, ಶ್ವೇತ ಎ, ಶೋಭಾ ರಾಜೇಶ್,ವೇದಾವತಿ,ಲಕ್ಷ್ಮೀಶೇಖರ್ ದೇವಾಡಿಗ, ಮನಪಾದ ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಸಹಕಾರ ಭಾರತಿ ಪ್ರಕೋಷ್ಟದ ಅಶೋಕ್ ಶೆಟ್ಟಿ ತಡಂಬೈಲ್, ಬಿಜೆಪಿ ಮಂಡಲ ಪ್ರಮುಖರು, ಪದಾಧಿಕಾರಿಗಳು, ರಿಕ್ಷಾಚಾಲಕ ಮಾಲಕ ,ಕಾರು ಚಾಲಕ ಮಾಲಕ ಸಂಘದ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು