1:21 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಎಂಆರ್‍ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಿಟೀಕರಣ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

04/02/2025, 00:04

ಸುರತ್ಕಲ್(reporterkarnataka.com): ಸುರತ್ಕಲ್ ಎಂಆರ್‍ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆಯನ್ನು ಮಂಗಳೂರು ಮಹಾನಗರ ಪಾಲಿಕೆ ನಿಧಿ 78 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರಿಟ್ ಕಾಮಗಾರಿ ನಡೆಸು ಸುಸಜ್ಜಿತ ರಸ್ತೆಯನ್ನಾಗಿ ಪರಿವರ್ತಿಸಲಾಗಿದ್ದು ಸೋಮವಾರ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ರೈಲ್ವೆ ಇಲಾಖೆಯ ಆಧೀನದಲ್ಲಿರುವ ಸೇತುವೆಯಾದರೂ ಜನರ ಹಿತದೃಷ್ಠಿಯಿಂದ ಎನ್‍ಒಸಿ ಪಡೆದು ಕಾಂಕ್ರಿಟ್ ಮಾಡಲಾಗಿದೆ.
ರೈಲ್ವೆ ಮೇಲ್ಸೇತುವೆಯನ್ನು ಚತುಷ್ಪಥ ಮಾಡುವ ಅಗತ್ಯವಿದ್ದು ಜಾಗ ಗುರುತಿಸಿ ಹೆಚ್ಚುವರಿ ಕಾಂಕ್ರಿಟ್ ಮಾಡಲಾಗಿದೆ. ಸಂಸದರಾದ ಬೃಜೇಶ್ ಚೌಟ ಹಾಗೂ ರೈಲ್ವೆ ಸಚಿವ ಸೋಮಣ್ಣ ಅವರಲ್ಲಿ ಪ್ರಸ್ತಾವನೆ ಇರಿಸಲಾಗಿದ್ದು ಭವಿಷ್ಯದಲ್ಲಿ ಅನುದಾನ ದೊರಕುವ ಭರವಸೆಯಿದೆ ಎಂದರು. ಹಂಪ್ಸ್ ಆಳವಡಿಸಿ ವೇಗ ನಿಯಂತ್ರಣಕ್ಕೆ ಒತ್ತು ನೀಡಲಾಗಿದೆ ಎಂದರು.
ರಸ್ತೆಯನ್ನು ಅವಧಿಗಿಂತ ಮುಂಚಿತವಾಗಿ ತ್ವರಿತವಾಗಿ ನಿರ್ಮಿಸಲು ಸಹಕರಿಸಿದ ಪಾಲಿಕೆ ಎಂಜಿನಿಯರ್ ಕಾರ್ತಿಕ್ ಶೆಟ್ಟಿ ,ಗುತ್ತಿಗೆದಾರರಾದ ಸುಧಾಕರ ಪೂಂಜಾ,ಮನಪಾ ಸದಸ್ಯರನ್ನು ಹಾಗೂ ಸುಮಾರು ಒಂದು ತಿಂಗಳ ಕಾಲ ಸಂಚಾರದಲ್ಲಿ ಸಹಕರಿಸಿದ ವಾಹನ ಚಾಲಕರು,ಸ್ಥಳೀಯರನ್ನು ಶಾಸಕರು ಶ್ಲಾಘಿಸಿದರು.
ಶಾಸಕರು ಹೊಸ ರಸ್ತೆಯಲ್ಲಿ ಆಟೋ ರಿಕ್ಷಾ ಸ್ವತಃ ಚಲಾಯಿಸಿ ಹೊಸ ರಸ್ತೆಯಲ್ಲಿ ಸುರಕ್ಷತೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.


ಮೇಯರ್ ಮನೋಜ್ ಕುಮಾರ್ ಮಾತನಾಡಿ ಶಾಸಕರ ನೆರವಿನೊಂದಿಗೆ ಇಲ್ಲಿನ ಸೇತುವೆ ಕಾಂಕ್ರಿಟ್ ಮಾಡಲಾಗಿದ್ದು ಮೂಲಸೌಕರ್ಯಗಳಿಗೆ ಒತ್ತು ನೀಡಲಾಗಿದೆ ಎಂದರು. ಉಪಮೇಯರ್ ಬಾನುಮತಿ, ಸ್ಥಳೀಯ ಮನಪಾ ಸದಸ್ಯರಾದ ಸರಿತಶಶಿಧರ್, ವರುಣ್ ಚೌಟ, ಲೋಕೇಶ್ ಬೊಳ್ಳಾಜೆ,ನಯನ ಆರ್.ಕೋಟ್ಯಾನ್, ಶ್ವೇತ ಎ, ಶೋಭಾ ರಾಜೇಶ್,ವೇದಾವತಿ,ಲಕ್ಷ್ಮೀಶೇಖರ್ ದೇವಾಡಿಗ, ಮನಪಾದ ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಸಹಕಾರ ಭಾರತಿ ಪ್ರಕೋಷ್ಟದ ಅಶೋಕ್ ಶೆಟ್ಟಿ ತಡಂಬೈಲ್, ಬಿಜೆಪಿ ಮಂಡಲ ಪ್ರಮುಖರು, ಪದಾಧಿಕಾರಿಗಳು, ರಿಕ್ಷಾಚಾಲಕ ಮಾಲಕ ,ಕಾರು ಚಾಲಕ ಮಾಲಕ ಸಂಘದ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು