9:17 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 2024 ; ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್‌ಗೆ ಕಿರೀಟ | 10 ಮಂದಿ ರಾಜ್ಯ ಮಟ್ಟಕ್ಕೆ ಆಯ್ಕೆ

22/05/2024, 14:46

ಮಗಳೂರು : ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್ ನೇತೃತ್ವದಲ್ಲಿ ಪಾತ್‌ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಮತ್ತು ಲೇಡಿಸ್ ಸಲೂನ್ ಸಹಯೋಗದಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ 5 ನೇ ಆವೃತ್ತಿಯ ಫೈನಲ್ ಸ್ಪರ್ಧೆ ಮಂಗಳೂರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಜರಗಿತು.

ಈ ಬಗ್ಗೆ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, 25ಕ್ಕೂ ಅಧಿಕ ಸ್ಪರ್ಧಿಗಳು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಸ್ಪರ್ಧೆಯ ಅಂತಿಮ ಹಂತದಲ್ಲಿ ಭಾಗವಹಿಸಿದ್ದು, 10 ಮಂದಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದರು.

ವಿಜೇತರು :
ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024 ಕಿರೀಟವನ್ನು ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್ ಮುಡಿಗೇರಿಸಿಕೊಂಡರು. ಡಾ.ರಶ್ಮಾ ಪ್ರಥಮ ರನ್ನರ್ ಅಪ್, ಡಾ.ಶೃತಿ ಬಳ್ಳಾಲ್ ಹಾಗೂ ರಮ್ಯ ದ್ವಿತೀಯ ರನ್ನರ್ ಅಪ್, ವಿದ್ಯಾ ಸಂಪತ್ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು.

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024ರ ಕ್ಲಾಸಿಕ್ ವಿಭಾಗದಲ್ಲಿ ಸಬೀತಾ ವಿಜೇತರಾಗಿದ್ದು, ಡಾ.ಅರ್ಚನಾ ಪ್ರಥಮ ರನ್ನರ್ ಅಪ್, ಸೌಮ್ಯ ರಾವ್ ದ್ವಿತೀಯ ರನ್ನರ್ ಅಪ್, ಸವಿತಾ ಭಂಡಾರಿ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು. ಸೂಪರ್ ಕ್ಲಾಸಿಕ್ ವಿಭಾಗದಲ್ಲಿ ನಂದಿನಿ ಅವರು ವಿಜೇತರಾಗಿದ್ದಾರೆ.

ಅದ್ಧೂರಿಯಾಗಿ ನಡೆದ ಸೌಂದರ್ಯ ಸ್ಪರ್ಧೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರ ಮನಗೆದ್ದಿತು. ನೃತ್ಯ, ಗಾಯನ ಸೇರಿದಂತೆ ಇತರ ಕಾರ್ಯಕ್ರಮಗಳು ಕೂಡ ಈ ಸಂದರ್ಭದಲ್ಲಿ ಮೂಡಿಬಂದಿತ್ತು.

ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, ಮರ್ಸಿ ಬ್ಯೂಟಿ ಅಕಾಡೆಮಿಯ ಮಾಲಕರು ಹಾಗು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ಮರ್ಸಿ ವೀಣಾ ಡಿಸೋಜಾ, ಸಂಘಟಕರಾದ ಅನಿಶಾ ಗಂಗೂಲಿ, ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್, ಡಾ.ಶೃತಿ ಬಳ್ಳಾಲ್, ವಿದ್ಯಾ ಸಂಪತ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು