6:28 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 2024 ; ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್‌ಗೆ ಕಿರೀಟ | 10 ಮಂದಿ ರಾಜ್ಯ ಮಟ್ಟಕ್ಕೆ ಆಯ್ಕೆ

22/05/2024, 14:46

ಮಗಳೂರು : ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್ ನೇತೃತ್ವದಲ್ಲಿ ಪಾತ್‌ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಮತ್ತು ಲೇಡಿಸ್ ಸಲೂನ್ ಸಹಯೋಗದಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ 5 ನೇ ಆವೃತ್ತಿಯ ಫೈನಲ್ ಸ್ಪರ್ಧೆ ಮಂಗಳೂರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಜರಗಿತು.

ಈ ಬಗ್ಗೆ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, 25ಕ್ಕೂ ಅಧಿಕ ಸ್ಪರ್ಧಿಗಳು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಸ್ಪರ್ಧೆಯ ಅಂತಿಮ ಹಂತದಲ್ಲಿ ಭಾಗವಹಿಸಿದ್ದು, 10 ಮಂದಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದರು.

ವಿಜೇತರು :
ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024 ಕಿರೀಟವನ್ನು ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್ ಮುಡಿಗೇರಿಸಿಕೊಂಡರು. ಡಾ.ರಶ್ಮಾ ಪ್ರಥಮ ರನ್ನರ್ ಅಪ್, ಡಾ.ಶೃತಿ ಬಳ್ಳಾಲ್ ಹಾಗೂ ರಮ್ಯ ದ್ವಿತೀಯ ರನ್ನರ್ ಅಪ್, ವಿದ್ಯಾ ಸಂಪತ್ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು.

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024ರ ಕ್ಲಾಸಿಕ್ ವಿಭಾಗದಲ್ಲಿ ಸಬೀತಾ ವಿಜೇತರಾಗಿದ್ದು, ಡಾ.ಅರ್ಚನಾ ಪ್ರಥಮ ರನ್ನರ್ ಅಪ್, ಸೌಮ್ಯ ರಾವ್ ದ್ವಿತೀಯ ರನ್ನರ್ ಅಪ್, ಸವಿತಾ ಭಂಡಾರಿ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು. ಸೂಪರ್ ಕ್ಲಾಸಿಕ್ ವಿಭಾಗದಲ್ಲಿ ನಂದಿನಿ ಅವರು ವಿಜೇತರಾಗಿದ್ದಾರೆ.

ಅದ್ಧೂರಿಯಾಗಿ ನಡೆದ ಸೌಂದರ್ಯ ಸ್ಪರ್ಧೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರ ಮನಗೆದ್ದಿತು. ನೃತ್ಯ, ಗಾಯನ ಸೇರಿದಂತೆ ಇತರ ಕಾರ್ಯಕ್ರಮಗಳು ಕೂಡ ಈ ಸಂದರ್ಭದಲ್ಲಿ ಮೂಡಿಬಂದಿತ್ತು.

ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, ಮರ್ಸಿ ಬ್ಯೂಟಿ ಅಕಾಡೆಮಿಯ ಮಾಲಕರು ಹಾಗು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ಮರ್ಸಿ ವೀಣಾ ಡಿಸೋಜಾ, ಸಂಘಟಕರಾದ ಅನಿಶಾ ಗಂಗೂಲಿ, ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್, ಡಾ.ಶೃತಿ ಬಳ್ಳಾಲ್, ವಿದ್ಯಾ ಸಂಪತ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು