5:16 AM Sunday12 - July 2026
ಬ್ರೇಕಿಂಗ್ ನ್ಯೂಸ್
*ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ

ಇತ್ತೀಚಿನ ಸುದ್ದಿ

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 2024 ; ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್‌ಗೆ ಕಿರೀಟ | 10 ಮಂದಿ ರಾಜ್ಯ ಮಟ್ಟಕ್ಕೆ ಆಯ್ಕೆ

22/05/2024, 14:46

ಮಗಳೂರು : ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್ ನೇತೃತ್ವದಲ್ಲಿ ಪಾತ್‌ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಮತ್ತು ಲೇಡಿಸ್ ಸಲೂನ್ ಸಹಯೋಗದಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ 5 ನೇ ಆವೃತ್ತಿಯ ಫೈನಲ್ ಸ್ಪರ್ಧೆ ಮಂಗಳೂರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಜರಗಿತು.

ಈ ಬಗ್ಗೆ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, 25ಕ್ಕೂ ಅಧಿಕ ಸ್ಪರ್ಧಿಗಳು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಸ್ಪರ್ಧೆಯ ಅಂತಿಮ ಹಂತದಲ್ಲಿ ಭಾಗವಹಿಸಿದ್ದು, 10 ಮಂದಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದರು.

ವಿಜೇತರು :
ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024 ಕಿರೀಟವನ್ನು ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್ ಮುಡಿಗೇರಿಸಿಕೊಂಡರು. ಡಾ.ರಶ್ಮಾ ಪ್ರಥಮ ರನ್ನರ್ ಅಪ್, ಡಾ.ಶೃತಿ ಬಳ್ಳಾಲ್ ಹಾಗೂ ರಮ್ಯ ದ್ವಿತೀಯ ರನ್ನರ್ ಅಪ್, ವಿದ್ಯಾ ಸಂಪತ್ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು.

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024ರ ಕ್ಲಾಸಿಕ್ ವಿಭಾಗದಲ್ಲಿ ಸಬೀತಾ ವಿಜೇತರಾಗಿದ್ದು, ಡಾ.ಅರ್ಚನಾ ಪ್ರಥಮ ರನ್ನರ್ ಅಪ್, ಸೌಮ್ಯ ರಾವ್ ದ್ವಿತೀಯ ರನ್ನರ್ ಅಪ್, ಸವಿತಾ ಭಂಡಾರಿ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು. ಸೂಪರ್ ಕ್ಲಾಸಿಕ್ ವಿಭಾಗದಲ್ಲಿ ನಂದಿನಿ ಅವರು ವಿಜೇತರಾಗಿದ್ದಾರೆ.

ಅದ್ಧೂರಿಯಾಗಿ ನಡೆದ ಸೌಂದರ್ಯ ಸ್ಪರ್ಧೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರ ಮನಗೆದ್ದಿತು. ನೃತ್ಯ, ಗಾಯನ ಸೇರಿದಂತೆ ಇತರ ಕಾರ್ಯಕ್ರಮಗಳು ಕೂಡ ಈ ಸಂದರ್ಭದಲ್ಲಿ ಮೂಡಿಬಂದಿತ್ತು.

ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, ಮರ್ಸಿ ಬ್ಯೂಟಿ ಅಕಾಡೆಮಿಯ ಮಾಲಕರು ಹಾಗು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ಮರ್ಸಿ ವೀಣಾ ಡಿಸೋಜಾ, ಸಂಘಟಕರಾದ ಅನಿಶಾ ಗಂಗೂಲಿ, ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್, ಡಾ.ಶೃತಿ ಬಳ್ಳಾಲ್, ವಿದ್ಯಾ ಸಂಪತ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು