9:30 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 2024 ; ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್‌ಗೆ ಕಿರೀಟ | 10 ಮಂದಿ ರಾಜ್ಯ ಮಟ್ಟಕ್ಕೆ ಆಯ್ಕೆ

22/05/2024, 14:46

ಮಗಳೂರು : ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್ ನೇತೃತ್ವದಲ್ಲಿ ಪಾತ್‌ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಮತ್ತು ಲೇಡಿಸ್ ಸಲೂನ್ ಸಹಯೋಗದಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ 5 ನೇ ಆವೃತ್ತಿಯ ಫೈನಲ್ ಸ್ಪರ್ಧೆ ಮಂಗಳೂರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಜರಗಿತು.

ಈ ಬಗ್ಗೆ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, 25ಕ್ಕೂ ಅಧಿಕ ಸ್ಪರ್ಧಿಗಳು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಸ್ಪರ್ಧೆಯ ಅಂತಿಮ ಹಂತದಲ್ಲಿ ಭಾಗವಹಿಸಿದ್ದು, 10 ಮಂದಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದರು.

ವಿಜೇತರು :
ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024 ಕಿರೀಟವನ್ನು ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್ ಮುಡಿಗೇರಿಸಿಕೊಂಡರು. ಡಾ.ರಶ್ಮಾ ಪ್ರಥಮ ರನ್ನರ್ ಅಪ್, ಡಾ.ಶೃತಿ ಬಳ್ಳಾಲ್ ಹಾಗೂ ರಮ್ಯ ದ್ವಿತೀಯ ರನ್ನರ್ ಅಪ್, ವಿದ್ಯಾ ಸಂಪತ್ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು.

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024ರ ಕ್ಲಾಸಿಕ್ ವಿಭಾಗದಲ್ಲಿ ಸಬೀತಾ ವಿಜೇತರಾಗಿದ್ದು, ಡಾ.ಅರ್ಚನಾ ಪ್ರಥಮ ರನ್ನರ್ ಅಪ್, ಸೌಮ್ಯ ರಾವ್ ದ್ವಿತೀಯ ರನ್ನರ್ ಅಪ್, ಸವಿತಾ ಭಂಡಾರಿ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು. ಸೂಪರ್ ಕ್ಲಾಸಿಕ್ ವಿಭಾಗದಲ್ಲಿ ನಂದಿನಿ ಅವರು ವಿಜೇತರಾಗಿದ್ದಾರೆ.

ಅದ್ಧೂರಿಯಾಗಿ ನಡೆದ ಸೌಂದರ್ಯ ಸ್ಪರ್ಧೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರ ಮನಗೆದ್ದಿತು. ನೃತ್ಯ, ಗಾಯನ ಸೇರಿದಂತೆ ಇತರ ಕಾರ್ಯಕ್ರಮಗಳು ಕೂಡ ಈ ಸಂದರ್ಭದಲ್ಲಿ ಮೂಡಿಬಂದಿತ್ತು.

ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, ಮರ್ಸಿ ಬ್ಯೂಟಿ ಅಕಾಡೆಮಿಯ ಮಾಲಕರು ಹಾಗು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ಮರ್ಸಿ ವೀಣಾ ಡಿಸೋಜಾ, ಸಂಘಟಕರಾದ ಅನಿಶಾ ಗಂಗೂಲಿ, ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್, ಡಾ.ಶೃತಿ ಬಳ್ಳಾಲ್, ವಿದ್ಯಾ ಸಂಪತ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು