1:43 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 2024 ; ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್‌ಗೆ ಕಿರೀಟ | 10 ಮಂದಿ ರಾಜ್ಯ ಮಟ್ಟಕ್ಕೆ ಆಯ್ಕೆ

22/05/2024, 14:46

ಮಗಳೂರು : ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್ ನೇತೃತ್ವದಲ್ಲಿ ಪಾತ್‌ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಮತ್ತು ಲೇಡಿಸ್ ಸಲೂನ್ ಸಹಯೋಗದಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ 5 ನೇ ಆವೃತ್ತಿಯ ಫೈನಲ್ ಸ್ಪರ್ಧೆ ಮಂಗಳೂರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಜರಗಿತು.

ಈ ಬಗ್ಗೆ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, 25ಕ್ಕೂ ಅಧಿಕ ಸ್ಪರ್ಧಿಗಳು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಸ್ಪರ್ಧೆಯ ಅಂತಿಮ ಹಂತದಲ್ಲಿ ಭಾಗವಹಿಸಿದ್ದು, 10 ಮಂದಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದರು.

ವಿಜೇತರು :
ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024 ಕಿರೀಟವನ್ನು ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್ ಮುಡಿಗೇರಿಸಿಕೊಂಡರು. ಡಾ.ರಶ್ಮಾ ಪ್ರಥಮ ರನ್ನರ್ ಅಪ್, ಡಾ.ಶೃತಿ ಬಳ್ಳಾಲ್ ಹಾಗೂ ರಮ್ಯ ದ್ವಿತೀಯ ರನ್ನರ್ ಅಪ್, ವಿದ್ಯಾ ಸಂಪತ್ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು.

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024ರ ಕ್ಲಾಸಿಕ್ ವಿಭಾಗದಲ್ಲಿ ಸಬೀತಾ ವಿಜೇತರಾಗಿದ್ದು, ಡಾ.ಅರ್ಚನಾ ಪ್ರಥಮ ರನ್ನರ್ ಅಪ್, ಸೌಮ್ಯ ರಾವ್ ದ್ವಿತೀಯ ರನ್ನರ್ ಅಪ್, ಸವಿತಾ ಭಂಡಾರಿ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು. ಸೂಪರ್ ಕ್ಲಾಸಿಕ್ ವಿಭಾಗದಲ್ಲಿ ನಂದಿನಿ ಅವರು ವಿಜೇತರಾಗಿದ್ದಾರೆ.

ಅದ್ಧೂರಿಯಾಗಿ ನಡೆದ ಸೌಂದರ್ಯ ಸ್ಪರ್ಧೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರ ಮನಗೆದ್ದಿತು. ನೃತ್ಯ, ಗಾಯನ ಸೇರಿದಂತೆ ಇತರ ಕಾರ್ಯಕ್ರಮಗಳು ಕೂಡ ಈ ಸಂದರ್ಭದಲ್ಲಿ ಮೂಡಿಬಂದಿತ್ತು.

ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, ಮರ್ಸಿ ಬ್ಯೂಟಿ ಅಕಾಡೆಮಿಯ ಮಾಲಕರು ಹಾಗು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ಮರ್ಸಿ ವೀಣಾ ಡಿಸೋಜಾ, ಸಂಘಟಕರಾದ ಅನಿಶಾ ಗಂಗೂಲಿ, ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್, ಡಾ.ಶೃತಿ ಬಳ್ಳಾಲ್, ವಿದ್ಯಾ ಸಂಪತ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು