12:39 AM Friday5 - December 2025
ಬ್ರೇಕಿಂಗ್ ನ್ಯೂಸ್
ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು

ಇತ್ತೀಚಿನ ಸುದ್ದಿ

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 2024 ; ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್‌ಗೆ ಕಿರೀಟ | 10 ಮಂದಿ ರಾಜ್ಯ ಮಟ್ಟಕ್ಕೆ ಆಯ್ಕೆ

22/05/2024, 14:46

ಮಗಳೂರು : ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್ ನೇತೃತ್ವದಲ್ಲಿ ಪಾತ್‌ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಮತ್ತು ಲೇಡಿಸ್ ಸಲೂನ್ ಸಹಯೋಗದಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ 5 ನೇ ಆವೃತ್ತಿಯ ಫೈನಲ್ ಸ್ಪರ್ಧೆ ಮಂಗಳೂರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಜರಗಿತು.

ಈ ಬಗ್ಗೆ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, 25ಕ್ಕೂ ಅಧಿಕ ಸ್ಪರ್ಧಿಗಳು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಸ್ಪರ್ಧೆಯ ಅಂತಿಮ ಹಂತದಲ್ಲಿ ಭಾಗವಹಿಸಿದ್ದು, 10 ಮಂದಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದರು.

ವಿಜೇತರು :
ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024 ಕಿರೀಟವನ್ನು ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್ ಮುಡಿಗೇರಿಸಿಕೊಂಡರು. ಡಾ.ರಶ್ಮಾ ಪ್ರಥಮ ರನ್ನರ್ ಅಪ್, ಡಾ.ಶೃತಿ ಬಳ್ಳಾಲ್ ಹಾಗೂ ರಮ್ಯ ದ್ವಿತೀಯ ರನ್ನರ್ ಅಪ್, ವಿದ್ಯಾ ಸಂಪತ್ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು.

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024ರ ಕ್ಲಾಸಿಕ್ ವಿಭಾಗದಲ್ಲಿ ಸಬೀತಾ ವಿಜೇತರಾಗಿದ್ದು, ಡಾ.ಅರ್ಚನಾ ಪ್ರಥಮ ರನ್ನರ್ ಅಪ್, ಸೌಮ್ಯ ರಾವ್ ದ್ವಿತೀಯ ರನ್ನರ್ ಅಪ್, ಸವಿತಾ ಭಂಡಾರಿ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು. ಸೂಪರ್ ಕ್ಲಾಸಿಕ್ ವಿಭಾಗದಲ್ಲಿ ನಂದಿನಿ ಅವರು ವಿಜೇತರಾಗಿದ್ದಾರೆ.

ಅದ್ಧೂರಿಯಾಗಿ ನಡೆದ ಸೌಂದರ್ಯ ಸ್ಪರ್ಧೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರ ಮನಗೆದ್ದಿತು. ನೃತ್ಯ, ಗಾಯನ ಸೇರಿದಂತೆ ಇತರ ಕಾರ್ಯಕ್ರಮಗಳು ಕೂಡ ಈ ಸಂದರ್ಭದಲ್ಲಿ ಮೂಡಿಬಂದಿತ್ತು.

ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, ಮರ್ಸಿ ಬ್ಯೂಟಿ ಅಕಾಡೆಮಿಯ ಮಾಲಕರು ಹಾಗು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ಮರ್ಸಿ ವೀಣಾ ಡಿಸೋಜಾ, ಸಂಘಟಕರಾದ ಅನಿಶಾ ಗಂಗೂಲಿ, ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್, ಡಾ.ಶೃತಿ ಬಳ್ಳಾಲ್, ವಿದ್ಯಾ ಸಂಪತ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು