5:30 AM Saturday12 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 2024 ; ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್‌ಗೆ ಕಿರೀಟ | 10 ಮಂದಿ ರಾಜ್ಯ ಮಟ್ಟಕ್ಕೆ ಆಯ್ಕೆ

22/05/2024, 14:46

ಮಗಳೂರು : ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್ ನೇತೃತ್ವದಲ್ಲಿ ಪಾತ್‌ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಮತ್ತು ಲೇಡಿಸ್ ಸಲೂನ್ ಸಹಯೋಗದಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ 5 ನೇ ಆವೃತ್ತಿಯ ಫೈನಲ್ ಸ್ಪರ್ಧೆ ಮಂಗಳೂರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಜರಗಿತು.

ಈ ಬಗ್ಗೆ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, 25ಕ್ಕೂ ಅಧಿಕ ಸ್ಪರ್ಧಿಗಳು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಸ್ಪರ್ಧೆಯ ಅಂತಿಮ ಹಂತದಲ್ಲಿ ಭಾಗವಹಿಸಿದ್ದು, 10 ಮಂದಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದರು.

ವಿಜೇತರು :
ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024 ಕಿರೀಟವನ್ನು ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್ ಮುಡಿಗೇರಿಸಿಕೊಂಡರು. ಡಾ.ರಶ್ಮಾ ಪ್ರಥಮ ರನ್ನರ್ ಅಪ್, ಡಾ.ಶೃತಿ ಬಳ್ಳಾಲ್ ಹಾಗೂ ರಮ್ಯ ದ್ವಿತೀಯ ರನ್ನರ್ ಅಪ್, ವಿದ್ಯಾ ಸಂಪತ್ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು.

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024ರ ಕ್ಲಾಸಿಕ್ ವಿಭಾಗದಲ್ಲಿ ಸಬೀತಾ ವಿಜೇತರಾಗಿದ್ದು, ಡಾ.ಅರ್ಚನಾ ಪ್ರಥಮ ರನ್ನರ್ ಅಪ್, ಸೌಮ್ಯ ರಾವ್ ದ್ವಿತೀಯ ರನ್ನರ್ ಅಪ್, ಸವಿತಾ ಭಂಡಾರಿ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು. ಸೂಪರ್ ಕ್ಲಾಸಿಕ್ ವಿಭಾಗದಲ್ಲಿ ನಂದಿನಿ ಅವರು ವಿಜೇತರಾಗಿದ್ದಾರೆ.

ಅದ್ಧೂರಿಯಾಗಿ ನಡೆದ ಸೌಂದರ್ಯ ಸ್ಪರ್ಧೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರ ಮನಗೆದ್ದಿತು. ನೃತ್ಯ, ಗಾಯನ ಸೇರಿದಂತೆ ಇತರ ಕಾರ್ಯಕ್ರಮಗಳು ಕೂಡ ಈ ಸಂದರ್ಭದಲ್ಲಿ ಮೂಡಿಬಂದಿತ್ತು.

ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, ಮರ್ಸಿ ಬ್ಯೂಟಿ ಅಕಾಡೆಮಿಯ ಮಾಲಕರು ಹಾಗು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ಮರ್ಸಿ ವೀಣಾ ಡಿಸೋಜಾ, ಸಂಘಟಕರಾದ ಅನಿಶಾ ಗಂಗೂಲಿ, ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್, ಡಾ.ಶೃತಿ ಬಳ್ಳಾಲ್, ವಿದ್ಯಾ ಸಂಪತ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು