12:39 AM Wednesday2 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 2024 ; ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್‌ಗೆ ಕಿರೀಟ | 10 ಮಂದಿ ರಾಜ್ಯ ಮಟ್ಟಕ್ಕೆ ಆಯ್ಕೆ

22/05/2024, 14:46

ಮಗಳೂರು : ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್ ನೇತೃತ್ವದಲ್ಲಿ ಪಾತ್‌ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಮತ್ತು ಲೇಡಿಸ್ ಸಲೂನ್ ಸಹಯೋಗದಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ 5 ನೇ ಆವೃತ್ತಿಯ ಫೈನಲ್ ಸ್ಪರ್ಧೆ ಮಂಗಳೂರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಜರಗಿತು.

ಈ ಬಗ್ಗೆ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, 25ಕ್ಕೂ ಅಧಿಕ ಸ್ಪರ್ಧಿಗಳು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಸ್ಪರ್ಧೆಯ ಅಂತಿಮ ಹಂತದಲ್ಲಿ ಭಾಗವಹಿಸಿದ್ದು, 10 ಮಂದಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದರು.

ವಿಜೇತರು :
ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024 ಕಿರೀಟವನ್ನು ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್ ಮುಡಿಗೇರಿಸಿಕೊಂಡರು. ಡಾ.ರಶ್ಮಾ ಪ್ರಥಮ ರನ್ನರ್ ಅಪ್, ಡಾ.ಶೃತಿ ಬಳ್ಳಾಲ್ ಹಾಗೂ ರಮ್ಯ ದ್ವಿತೀಯ ರನ್ನರ್ ಅಪ್, ವಿದ್ಯಾ ಸಂಪತ್ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು.

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024ರ ಕ್ಲಾಸಿಕ್ ವಿಭಾಗದಲ್ಲಿ ಸಬೀತಾ ವಿಜೇತರಾಗಿದ್ದು, ಡಾ.ಅರ್ಚನಾ ಪ್ರಥಮ ರನ್ನರ್ ಅಪ್, ಸೌಮ್ಯ ರಾವ್ ದ್ವಿತೀಯ ರನ್ನರ್ ಅಪ್, ಸವಿತಾ ಭಂಡಾರಿ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು. ಸೂಪರ್ ಕ್ಲಾಸಿಕ್ ವಿಭಾಗದಲ್ಲಿ ನಂದಿನಿ ಅವರು ವಿಜೇತರಾಗಿದ್ದಾರೆ.

ಅದ್ಧೂರಿಯಾಗಿ ನಡೆದ ಸೌಂದರ್ಯ ಸ್ಪರ್ಧೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರ ಮನಗೆದ್ದಿತು. ನೃತ್ಯ, ಗಾಯನ ಸೇರಿದಂತೆ ಇತರ ಕಾರ್ಯಕ್ರಮಗಳು ಕೂಡ ಈ ಸಂದರ್ಭದಲ್ಲಿ ಮೂಡಿಬಂದಿತ್ತು.

ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, ಮರ್ಸಿ ಬ್ಯೂಟಿ ಅಕಾಡೆಮಿಯ ಮಾಲಕರು ಹಾಗು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ಮರ್ಸಿ ವೀಣಾ ಡಿಸೋಜಾ, ಸಂಘಟಕರಾದ ಅನಿಶಾ ಗಂಗೂಲಿ, ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್, ಡಾ.ಶೃತಿ ಬಳ್ಳಾಲ್, ವಿದ್ಯಾ ಸಂಪತ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು