10:16 AM Monday19 - May 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ… ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… MSEM | ಮುಂದಿನ ದಿನಗಳಲ್ಲಿ ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tamilnadu | ಮಂಜೇಶ್ವರದ ಸ್ನೇಹಾಲಯದಿಂದ ಕುಂಬಕೋಣಂವರೆಗೆ ಗಿರಿ ಪಯಣ: ಕುಟುಂಬ ಜತೆ ಮತ್ತೆ… ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ… ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ…

ಇತ್ತೀಚಿನ ಸುದ್ದಿ

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 2024 ; ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್‌ಗೆ ಕಿರೀಟ | 10 ಮಂದಿ ರಾಜ್ಯ ಮಟ್ಟಕ್ಕೆ ಆಯ್ಕೆ

22/05/2024, 14:46

ಮಗಳೂರು : ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್ ನೇತೃತ್ವದಲ್ಲಿ ಪಾತ್‌ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಮತ್ತು ಲೇಡಿಸ್ ಸಲೂನ್ ಸಹಯೋಗದಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ 5 ನೇ ಆವೃತ್ತಿಯ ಫೈನಲ್ ಸ್ಪರ್ಧೆ ಮಂಗಳೂರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಜರಗಿತು.

ಈ ಬಗ್ಗೆ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, 25ಕ್ಕೂ ಅಧಿಕ ಸ್ಪರ್ಧಿಗಳು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಸ್ಪರ್ಧೆಯ ಅಂತಿಮ ಹಂತದಲ್ಲಿ ಭಾಗವಹಿಸಿದ್ದು, 10 ಮಂದಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದರು.

ವಿಜೇತರು :
ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024 ಕಿರೀಟವನ್ನು ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್ ಮುಡಿಗೇರಿಸಿಕೊಂಡರು. ಡಾ.ರಶ್ಮಾ ಪ್ರಥಮ ರನ್ನರ್ ಅಪ್, ಡಾ.ಶೃತಿ ಬಳ್ಳಾಲ್ ಹಾಗೂ ರಮ್ಯ ದ್ವಿತೀಯ ರನ್ನರ್ ಅಪ್, ವಿದ್ಯಾ ಸಂಪತ್ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು.

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024ರ ಕ್ಲಾಸಿಕ್ ವಿಭಾಗದಲ್ಲಿ ಸಬೀತಾ ವಿಜೇತರಾಗಿದ್ದು, ಡಾ.ಅರ್ಚನಾ ಪ್ರಥಮ ರನ್ನರ್ ಅಪ್, ಸೌಮ್ಯ ರಾವ್ ದ್ವಿತೀಯ ರನ್ನರ್ ಅಪ್, ಸವಿತಾ ಭಂಡಾರಿ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು. ಸೂಪರ್ ಕ್ಲಾಸಿಕ್ ವಿಭಾಗದಲ್ಲಿ ನಂದಿನಿ ಅವರು ವಿಜೇತರಾಗಿದ್ದಾರೆ.

ಅದ್ಧೂರಿಯಾಗಿ ನಡೆದ ಸೌಂದರ್ಯ ಸ್ಪರ್ಧೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರ ಮನಗೆದ್ದಿತು. ನೃತ್ಯ, ಗಾಯನ ಸೇರಿದಂತೆ ಇತರ ಕಾರ್ಯಕ್ರಮಗಳು ಕೂಡ ಈ ಸಂದರ್ಭದಲ್ಲಿ ಮೂಡಿಬಂದಿತ್ತು.

ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, ಮರ್ಸಿ ಬ್ಯೂಟಿ ಅಕಾಡೆಮಿಯ ಮಾಲಕರು ಹಾಗು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ಮರ್ಸಿ ವೀಣಾ ಡಿಸೋಜಾ, ಸಂಘಟಕರಾದ ಅನಿಶಾ ಗಂಗೂಲಿ, ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್, ಡಾ.ಶೃತಿ ಬಳ್ಳಾಲ್, ವಿದ್ಯಾ ಸಂಪತ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು