1:41 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಎಸ್‌.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಿಂದ ಸಕ್ಕರೆ ತಂತ್ರಜ್ಞಾನದಲ್ಲಿ ಎಂಎಸ್ಸಿ ಕೋರ್ಸ್‌ ಆರಂಭ: ಸಚಿವ ಶಿವಾನಂದ ಪಾಟೀಲ್

01/03/2025, 23:35

ಬೆಂಗಳೂರು(reporterkarnataka.com): ಬೆಳಗಾವಿಯ ಎಸ್‌.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಿಂದ ಸಕ್ಕರೆ ತಂತ್ರಜ್ಞಾನದಲ್ಲಿ ಎಂಎಸ್ಸಿ., ಕೋರ್ಸ್‌ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಸಕ್ಕರೆ ಸಚಿವ ಶಿವಾನಂದ ಎಸ್‌. ಪಾಟೀಲ್ ಹೇಳಿದ್ದಾರೆ.
ಎಸ್‌.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬೆಳಗಾವಿ ಸಮೀಪದ ಬೆನಕನಹಳ್ಳಿಯಲ್ಲಿ ಸಕ್ಕರೆ, ಮದ್ಯಸಾರ ಸಂಶೋಧನಾ ಕೇಂದ್ರ ಆರಂಭಿಸಲು ಹಾಗೂ ಆಸಕ್ತರಿಗೆ ಸಕ್ಕರೆ ಮತ್ತು ತಂತ್ರಜ್ಞಾನದಲ್ಲಿ ಪಿ.ಎಚ್‌ಡಿಗೆ ಅವಕಾಶ ಕಲ್ಪಿಸಲು ಆಡಳಿತ ಮಂಡಳಿ ನಿರ್ಣಯ ಮಾಡಿದೆ. ಕಾಲೇಜು ಆರಂಭಿಸಲು ಸುಮಾರು ರೂ 15 ಕೋಟಿ ಅಗತ್ಯವಿದ್ದು, ತಕ್ಷಣಕ್ಕೆ ರೂ 5 ಕೋಟಿ ತೆಗೆದಿರಿಸಲು ನಿರ್ಧರಿಸಲಾಯಿತು. ಹಾಗೂ ಕಾಲೇಜನ್ನು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದೊಂದಿಗೆ ಸಂಯೋಜನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕಬ್ಬಿನ ಬೆಳೆಗೆ ಬೆಂಕಿ ಬಿದ್ದು ನಷ್ಟ ಸಂಭವಿಸಿದಾಗ ಸಂಸ್ಥೆಯಿಂದ ಪರಿಹಾರ ನೀಡಲು ಕಾರ್ಪಸ್‌ ಫಂಡ್‌ ಸ್ಥಾಪಿಸಲು ನಿರ್ಧರಿಸಲಾಗಿದೆ. ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಉದ್ದಿಮೆಗೆ ಸಂಬಂಧಿಸಿದಂತೆ ಸಂಕಷ್ಟ (ಅಗ್ನಿ ಅವಘಡ) ಎದುರಾದಲ್ಲಿ ತಕ್ಕಮಟ್ಟಿಗೆ ಪರಿಹಾರ ನೀಡುವ ಉದ್ದೇಶವಿದ್ದು, ಮಾರ್ಗಸೂಚಿ ರೂಪಿಸಲಾಗುವುದು ಎಂದು ವಿವರಿಸಿದ್ದಾರೆ.
ಅಂಗಾಂಶ ಕೃಷಿ ಪ್ರಯೋಗಾಲಯ ಒಂಭತ್ತು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಇದುವರೆಗೆ 16.47 ಲಕ್ಷ ಸಸಿಗಳನ್ನು ಉತ್ಪಾದಿಸಲಾಗಿದೆ. ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡೆನಾಶಕ ಉತ್ಪಾದಕ ಘಟಕ ನಾಲ್ಕು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, 2023-24ರ ಅಂತ್ಯಕ್ಕೆ 8.26 ಮೆಟ್ರಿಕ್ ಟನ್ ಉತ್ಪಾದನೆ ಮಾಡಲಾಗಿದೆ.
ಈಗ ರೈತ ರು ಬೆಳೆಯುತ್ತಿರುವ ಕೆಲವು ತಳಿಯ ಇಳುವರಿ ಕಡಿಮೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಉತ್ತಮ ಇಳುವರಿಯ ತಳಿಯನ್ನು ರೈತರಿಗೆ ವಿತರಣೆ ಮಾಡಬೇಕಿದ್ದು, ಈ ಉದ್ದೇಶಕ್ಕೆ ತಜ್ಞರ ಸಮಿತಿಯೊಂದನ್ನು ರಚನೆ ಮಾಡಿ ಅವರ ಸಲಹೆ ಪಡೆದು ಯಾವ ತಳಿಯನ್ನು ಬೆಳೆಯಬೇಕು ಹಾಗೂ ಹೆಚ್ಚುವರಿ ಇಳುವರಿ ಕೊಡುವ ಕಬ್ಬನ್ನು ಎಸ್‌. ನಿಜಲಿಂಗಪ್ಪ ಸಂಸ್ಥೆಯಿಂದ ಅಭಿವೃದ್ಧಿ ಪಡಿಸಬೇಕು ಎಂದು ನಿರ್ಧರಿಸಲಾಯಿತು. ಅಂಗಾಂಶ ಕೃಷಿ ಪ್ರಯೋಗಾಲಯ ಹಾಗೂ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡೆನಾಶಕ ಉತ್ಪಾದನಾ ಘಟಕವನ್ನು ಮತ್ತಷ್ಟು ಬಲಪಡಿಸಬೇಕು. ಈ ಮೂಲಕ ಕಬ್ಬು ಬೆಳೆಗಾರರಿಗೆ ನೆರವಾಗಬೇಕು ಎಂಬ ಬಗ್ಗೆ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಅವರು ತಿಳಿಸಿದ್ದಾರೆ.
ಸಕ್ಕರೆ ಕಾರ್ಖಾನೆಗಳು ವರ್ಷದಲ್ಲಿ ಕೇವಲ 90 ದಿನ ಮಾತ್ರ ಕಾರ್ಯನಿರ್ವಹಣೆ ಮಾಡಿದರೆ ಲಾಭದಲ್ಲಿ ಮುನ್ನಡೆಸಲು ಕಷ್ಟಸಾಧ್ಯ. ಹೀಗಾಗಿ ಕನಿಷ್ಟ 150 ದಿನ ಕಾರ್ಯನಿರ್ವಹಿಸುವಂತಾಗಬೇಕು. ಕಬ್ಬು ನುರಿಸುವ ಅವಧಿ ಮುಗಿದ ನಂತರ ಉಪ ಉತ್ಪನ್ನಗಳ ತಯಾರಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಸೂಕ್ತ ಎಂದರು.
ಕಬ್ಬು ಬೆಳೆಗಾರರಿಗೆ ಸಲಹೆ ಸೂಚನೆ ನೀಡುವ ಉದ್ದೇಶದಿಂದ ದೇಶದ ವಿವಿಧ ಸಂಶೋಧನಾ ಕೇಂದ್ರಗಳ ಪರಿಣಿತರನ್ನು ಎಸ್. ನಿಜಲಿಂಗಪ್ಪ ಸಂಸ್ಥೆಗೆ ಆಹ್ವಾನಿಸಲಾಗುವುದು ಎಂದು ಸಚಿವರು ತಿಳಿಸಿದರು.
ತಾಂತ್ರಿಕ ಸಮರ್ಥತೆಯನ್ನು ಪರಿಗಣಿಸಿ ಪ್ರತಿ ವರ್ಷ ಸಕ್ಕರೆ ಕಾರ್ಖಾನೆಗಳಿಗೆ ಪ್ರಶಸ್ತಿ ನೀಡಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಸಕ್ಕರೆ ಕಾರ್ಖಾನೆಗಳು ಪ್ರತಿ ವರ್ಷ ಸಲ್ಲಿಸುವ ಆರ್.ಟಿ. 8 (ಸಿ) ಆಧಾರದ ಅಂಶಗಳನ್ನು ಪರಿಗಣಿಸಿ ಮತ್ತು ಕಬ್ಬು ಬೆಳೆಗಾರರಿಗೆ ಪಾವತಿ ಮಾಡಿದ ಕಬ್ಬಿನ ಬಿಲ್ಲಿನ ಅಂಶಗಳನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗುವುದು. ಎಂದು ತಿಳಿಸಿದ್ದಾರೆ.

ಎಸ್‌.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ನಿರ್ದೇಶಕರಾದ ಸತ್ಯಜಿತ್ ಪಾಟೀಲ್, ಸಿ.ಬಿ.ಪಾಟೀಲ್ ಅಧಿಕಾರಿಗಳಾದ ರಮಣ್ ದೀಪ್ ಚೌಧರಿ, ರವಿಕುಮಾರ್, ರಾಜಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು