1:38 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಎಂಎಸ್ ಪಿ ಕಾನೂನು ಜಾರಿಗೊಳಿಸಿ ರೈತರ ಉಳಿಸಿ ಹೋರಾಟ ಕೈಗೆತ್ತಿಕೊಂಡ ಬಿ. ಆರ್. ಪಾಟೀಲ್: ವಿಧಾನ ಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ

04/01/2025, 22:08

ಬೆಂಗಳೂರು(reporterkarnataka.com):ಎಂಎಸ್ ಪಿ ಶಾಸನಬದ್ಧಗೊಳಿಸಿ ರೈತರನ್ನು ಉಳಿಸಿ ಹೋರಾಟವನ್ನು ಕರ್ನಾಟಕ ರಾಜ್ಯದ ರೈತರ ಪ್ರತಿನಿಧಿ ಬಿ. ಆರ್. ಪಾಟೀಲ್ ಅವರು ಕೈಗೆತ್ತಿಕೊಂಡಿದ್ದಾರೆ.
ಪ್ರೊ. ಎಂ.ಎಸ್. ಸ್ವಾಮಿನಾಥನ್ ವರದಿಯ ಅನ್ವಯ ರೈತರ ಬೆಳೆಗಳಿಗೆ ಸಿ ೨ + ೫೦% ಕನಿಷ್ಟ ಬೆಂಬಲ ಬೆಲೆ ನೀಡಬೇಕೆಂಬುದು ರೈತರ ಹಕ್ಕೋತ್ತಾಯವನ್ನು ಬೆಂಬಲಿಸಿ ಶ್ರೀ ಜಗತ್ ಸಿಂಗ್ ದಲ್ಲೈವಾಲ ಅವರು ನವೆಂಬರ್ ೨೬, ೨೦೨೪ ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯ ತೀವ್ರಹದಗೆಟ್ಟಿದ್ದರಿಂದ ಸರ್ವೋಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಅವರನ್ನು ಪಂಜಾಬ್ ಪಕ್ಕದ ಖನೌರಿ ಬಾರ್ಡರ್ ಆಸ್ಪ್ರತ್ರೆಗೆ ದಾಖಲಿಸಲಾಗಿದೆ.


ಈ ಹಿನ್ನೆಲೆಯಲ್ಲಿ ಕನ್ನಡ ನಾಡಿನ ಹೆಸರಾಂತ ಹೋರಾಟಗಾರರು, ಅಳಂದ ಶಾಸಕ ಬಿ ಆರ್ ಪಾಟೀಲ್ ಅವರು ಇಂದು ವಿಧಾನ ಸೌಧ ಹಾಗೂ ವಿಕಾಸ ಸೌಧದ ಮಧ್ಯದಲ್ಲಿರುವ ಗಾಂಧಿ ಪ್ರತಿಮೆ ಎದುರು ದಲ್ಲೈವಾಲ ಅವರನ್ನು ಉಳಿಸಿ ಮತ್ತು ರೈತರಿಗೆ ಎಂ ಎಸ್ ಪಿ ಶಾಸನಬದ್ಧಗೊಳಿಸಿ ರೈತರನ್ನು ಉಳಿಸಿ ಎಂದು ಒಂದು ದಿನದ ಶಾಂತಿಯುತ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಈ ಪ್ರತಿಭಟನೆಯಲ್ಲಿ ಕರ್ನಾಟಕದ ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಕಾಂ ಮೋಹನ್ ಕುಮಾರ್ ಕೊಂಡಜ್ಜಿ, ರೈತ ಹೋರಾಟಗಾರ ರೈತ ಮುಖಂಡ ವೀರಸಂಗಯ್ಯ ಇನ್ನಿತರರು ಪಾಲ್ಗೊಂಡರು.
ಪಾಟೀಲರ ಈ ಸಾಂಕೇತಿಕ ಹೋರಾಟಕ್ಕೆ ಇಡೀ ರಾಜ್ಯದ ರೈತರು ರೈತ ಮುಖಂಡರು ಮತ್ತು ರೈತಪರ ಕಾಳಜಿಯ ಪ್ರತಿಯೊಬ್ಬರ ಬೆಂಬಲವೂ ಇದೆ ಎಂಬುದನ್ನು ಹೇಳಬೇಕಿಲ್ಲ. ಎಲ್ಲರ ಬೆಂಬಲ ಅವರಿಗಿದೆ. ಇಡೀ ರಾಜ್ಯದ ರೈತ ಕುಲದ ಪ್ರತಿನಿಧಿಯಾಗಿ ಬಿ.ಆರ್. ಪಾಟೀಲರು ಪ್ರತಭಟನೆಯಲ್ಲಿ ತೊಡಗಿದ್ದಾರೆ.
ಮೂರು ಲೋಕ ಸಭಾ ಚುನಾವಣೆಗಳಿಗೂ ಮುನ್ನ ರೈತರ ಬೆಳೆಗಳಿಗೆ ಎಂ.ಎಸ್.ಪಿ ನೀಡುವುದಾಗಿ ಆಶ್ವಾಸನೆ ನೀಡಿದ್ದ ಆಗಿನ ಮತ್ತು ಈಗಿನ ಪ್ರಧಾನಿ ಎಂ.ಎಸ್.ಪಿ ಶಾಸನಬದ್ಧಗೊಳಿಸಿಲ್ಲ. ಹಿಂದೊಮ್ಮೆ ಎಂಎಸ್.ಪಿ ಕೊಂಚ ಹೆಚ್ಚಿಸಿ ಅದನ್ನೇ ಸಿ೨ + ೫೦% ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡುವ ದುಸ್ಸಾಹಸಕ್ಕೂ ಕೇಂದ್ರ ಸರ್ಕಾರದ ಕೃಷಿ ಸಚಿವಾಲಯ ಮುಂದಾಗಿತ್ತು. ಅದಾಗ ಖುದ್ದು ಸ್ವಾಮಿನಾಥನ್ ಇದು ತಾವು ಸೂಚಿಸಿದ್ದ ಸಿ೨+೫೦% ಅಲ್ಲ ಎಂದು ಪತ್ರಿಕಾ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು