10:48 AM Monday6 - April 2026
ಬ್ರೇಕಿಂಗ್ ನ್ಯೂಸ್
Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ…

ಇತ್ತೀಚಿನ ಸುದ್ದಿ

ಮುಂಬೈ: ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮದಲ್ಲಿ ಪ್ರವೀಣ್ ಕುಮಾರ್  ಕೊಡಿಯಾಲ್ ಬೈಲ್ ಗೆ ಸನ್ಮಾನ

19/07/2022, 18:29

ಮುಂಬಯಿ(reporterkarnataka.com): ಕನ್ನಡ ನಾಡು- ನುಡಿ- ಸಂಸ್ಕೃತಿಯನ್ನು ಬಿಂಬಿಸುವ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ- 2022 ಕುರ್ಲಾದ ಬಂಟರ ಭವನದಲ್ಲಿ ನಡೆದಿದ್ದು,ಸಮಾರಂಭದಲ್ಲಿ ಕರ್ನಾಟಕ ಜನಪದ ಅಕಾಡೆಮಿಯ ದ.ಕ. ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಸೇರಿದಂತೆ 9 ಮಂದಿ ಸಾಧಕರನ್ನು ಸನ್ಮಾನಿಸಲಾಯಿತು.

ಮಂಗಳೂರು ವಿವಿ ತುಳು ಅಧ್ಯಯನ ಪೀಠದ ಸದಸ್ಯರೂ, ಮುಂಚೋಣಿಯ ದಾನಿಗಳು ಆದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ರಘುನಾಥ ರಾವ್ ಮಲ್ಕಾಪುರೆ ಸನ್ಮಾನಿಸಿದರು. ಪಮ್ಮಿ ಕೊಡಿಯಾಲ್ ಬೈಲ್ ಎಂದೇ ಖ್ಯಾತರಾಗಿರುವ ಪ್ರವೀಣ್ ಕುಮಾರ್ ಅವರು ಅಖಿಲ ಭಾರತ ಓಬಿಸಿ ಮಹಾಸಭಾದ ದ.ಕ. ಜಿಲ್ಲಾಧ್ಯಕ್ಷರೂ ಕೂಡ ಹೌದು. ರಂಗಾಸಕ್ತರು ಆಗಿರುವ ಅವರು ಸಿನಿಮಾ ಕ್ಷೇತ್ರದಲ್ಲಿಯೂ ಅಪಾರ ಒಲವು ಹೊಂದಿದ್ದಾರೆ.


ಈ ಸಂದರ್ಭದಲ್ಲಿ ಮುಂಬಯಿ ಸಾಹಿತ್ಯ ಕ್ಷೇತ್ರದ ಬಹುದೊಡ್ಡ ಹೆಸರು, ಕವಯತ್ರಿ, ಲೇಖಕಿ ಡಾ. ಸುನೀತಾ ಶೆಟ್ಟಿ, ವೈದ್ಯಕೀಯ ಕ್ಷೇತ್ರದ ಡಾ. ಸುರೇಶ್ ರಾವ್, ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿ, ಸಮಾಜ ಸೇವಕ ವಿಶು ಕುಮಾರ್ ಶೆಟ್ಟಿ ಅಂಬಲಪಾಡಿ, ಪ್ರಗತಿಪರ ಕೃಷಿಕ ಪ್ರಭಾಕರ ಕಲ್ಲೂರಾಯ ಹಾಗೂ ವಾಸ್ತು ತಜ್ಞ ಮಾರ್ತಾಂಡ ಪಂಡಿತ್ ನವೀನ್ ಚಂದ್ರ ಸನಿಲ್ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ರಾಷ್ಟಭಕ್ತಿ, ನಾಡಪ್ರೀತಿ ಮೊಳಗಿತು. ಕನ್ನಡದ ಕಂಪು ಎಲ್ಲೆಡೆ ಹರಡಿತು.

ಇತ್ತೀಚಿನ ಸುದ್ದಿ

ಜಾಹೀರಾತು