5:57 PM Friday30 - January 2026
ಬ್ರೇಕಿಂಗ್ ನ್ಯೂಸ್
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್

ಇತ್ತೀಚಿನ ಸುದ್ದಿ

ಮುದಗಲ್ಲ: 5 ಲಕ್ಷ ರೂ. ವೆಚ್ಚದಲ್ಲಿ ಗೋಶಾಲೆ ಶೆಡ್ ನಿರ್ಮಾಣಕ್ಕೆ ಸಂಸದರಿಂದ ಭೂಮಿ ಪೂಜೆ

27/08/2021, 08:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮುದಗಲ್ಲ ಪಟ್ಟಣದ ಗೋಶಾಲೆಗೆ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಮತ್ತು ಸಂಸದರ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ಮುದಗಲ್ಲ ಶ್ರೀ ಶರಣಮ್ಮ ಮಾತೆ ಗೋಶಾಲೆ ಕೇಂದ್ರಕ್ಕೆ ಅಂದಾಜು ಮೊತ್ತ 5 ಲಕ್ಷ ರೂಪಾಯಿ ಮೌಲ್ಯದ ಶೆಡ್ ನಿರ್ಮಾಣಕ್ಕೆ ಸಂಸದ ರಾಜಾ ಅಮರೇಶ್ವರ ನಾಯಕ ಗೋಶಾಲೆಯಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿಭೂಮಿ ಪೂಜೆ ನೆರವೇರಿಸಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ಆದರ್ಶ ಗ್ರಾಮ  2018-19 ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 30 ಗ್ರಾಮಗಳು ಆಯ್ಕೆ ಮಾಡಲಾಗಿದೆ. ತಾಲ್ಲೂಕಿನ ಆಶಿಹಾಳ ತಾಂಡ, ಕೆ. ಮರಿಯಮ್ಮನ ಹಳ್ಳಿ, ಜಂಗಿರಾಂಪೂರು, ಛತ್ತರ ನಾಲ್ಕು ಗ್ರಾಮಗಳು ಆದರ್ಶ ಗ್ರಾಮ ಯೋಜನೆಗೆ ಆಯ್ಕೆಯಾಗಿದ್ದು, ಪ್ರತಿ ಗ್ರಾಮಕ್ಕೆ ಅಂದಾಜು ಮೊತ್ತ 40 ಲಕ್ಷ ರೂಪಾಯಿರಂತೆ ಒಟ್ಟು1. 60 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಈ ಯೋಜನೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು. 

ಮುಂದಿನ ಪೀಳಿಗೆಗಾಗಿ ಗೋವು ಮತ್ತು ಪರಿಸರವನ್ನು ಕಾಪಾಡುವುದು ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವಾಗಿದೆ. ವಿವಿಧ ಬಗೆಯ ಗೋವುಗಳಿಂದ  ಸಕಲವೂ ಮನುಷ್ಯನಿಗೆ ಆರೋಗ್ಯಕ್ಕೆ ಔಷಧಿಯಾಗಿದೆ. ನಮ್ಮ ಸರ್ಕಾರ ಜನರ ಆರೋಗ್ಯ ರಕ್ಷಣೆಗೆ 1 ಕೋಟಿ 20 ಲಕ್ಷ ರೂಪಾಯಿ ಅಂಬುಲೆನ್ಸ್ ಗೆ ಬಿಡುಗಡೆ 

ಮಾಡಿದೆ. ಜನರ ಶುದ್ಧ ಕುಡಿಯುವ ನೀರಿಗಾಗಿ ಜಲ ಜೀವನ್ ಮಿಷನ್, ಜಲಧಾರೆ ಯೋಜನೆ, ಹರ್ ಗರ್ ಜಲ್ ಯೋಜನೆ,  ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ 2800 ಕೋಟಿ ರೂಪಾಯಿ ರೈತರಿಗೆ ನೀರಾವರಿ ಯೋಜನೆ ಮೀಸಲಿರಿಸಿದೆ. ಕೋವಿಡ್ ಅಲೆಯಿಂದ ತತ್ತರಿಸಿದ ಬಡ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಉಚಿತ ಅನ್ನ ಭಾಗ್ಯ ಯೋಜನೆ ಮುಂತಾದ ಜನಪರವಾದ ಯೋಜನೆ ಜಾರಿಗೆ ತಂದಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಡಾ. ಗುರುರಾಜ ದೇಶಪಾಂಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಗೋವು ರಕ್ಷಿತೆ ರಕ್ಷಿತ‌ಃ ನಾವು ಗೋವುಗಳನ್ನು ರಕ್ಷಣೆ ಮಾಡಿದರೆ ಗೋವು ನಮ್ಮ ಆರೋಗ್ಯ ರಕ್ಷಣೆ ಮಾಡುತ್ತದೆ. ಗೋಮಾತೆಗೆ ಯ ಸಗಣಿಯಿಂದ ಸಕಲವೂ ಸರ್ವ ಔಷಧಿ ಉಂಟಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ  ಬಿಜೆಪಿ ಮಂಡಲ ಅಧ್ಯಕ್ಷ ಸಣ್ಣ ಸಿದ್ದಯ್ಯ ಸ್ವಾಮಿ ಮೇಗಳಪೇಟೆ, ಗೋಶಾಲೆ ಅಧ್ಯಕ್ಷ ಶಿತಲ್ ಜೈನ್,  ಮಹಾಂತೇಶ ಹಿರೇಮಠ, ಗುರು ಬಸಪ್ಪ ಸಜ್ಜನ, ಗಜೇಂದ್ರ ನಾಯಕ, ಜಗನ್ನಾಥ ಕುಲಕರ್ಣಿ, ಗಿರಿಮಲ್ಲನಗೌಡ, ದ್ಯಾಮಣ್ಣ ನಾಯಕ, ಹುಲ್ಲೇಶ ಸಾಹುಕಾರ, ಸಂಗಮೇಶ, ವಿಜಯ ಪಾಟೀಲ್, ಫಕೀರಪ್ಪ ಕುರಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು