8:51 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ

09/01/2025, 10:41

ಮೋಹನ್ ನಂಜನಗೂಡು

info.reporterkarnataka@gmail.com

ಇಡೀ ದೇಶದಲ್ಲೇ ಇದೇ ಪ್ರಪ್ರಥಮವಾಗಿ ನಂಜನಗೂಡಿನಲ್ಲಿ ಶಿವಶರಣ ಒಕ್ಕಲಿಗರ ಮುದ್ದಣ್ಣ ಅವರ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.


ಶರಣರ ಸಂಘಗಳ ಒಕ್ಕೂಟ ಹಾಗೂ ಒಕ್ಕಲಿಗ ಸಮಾಜದ ಮುಖಂಡರ ಸಹಯೋಗದಲ್ಲಿ ಒಕ್ಕೂಟದ ಮಾರ್ಗದರ್ಶಕರಾದ ಬಸವ ಯೋಗೇಶ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ವಚನ ಗೀತೆ ಹಾಡುವ ಮೂಲಕ ಶಿವಶರಣ ಒಕ್ಕಲಿಗರ ಮುದ್ದಣ್ಣ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿ ತಮ್ಮ ಭಕ್ತಿ ನಮನ ಸಲ್ಲಿಸಿದರು.
ನಂತರ ಶರಣರ ಸಂಘಗಳ ಒಕ್ಕೂಟದ ಮಾರ್ಗದರ್ಶಕರಾದ ಬಸವ ಯೋಗೇಶ್ ಮಾತನಾಡಿ, ವಿಶ್ವದಲ್ಲೇ ಪ್ರಪ್ರಥಮವಾಗಿ
12ನೇ ಶತಮಾನದ ಶಿವಶರಣರಾಗಿದ್ದ ಒಕ್ಕಲಿಗ ಮುದ್ದಣ್ಣ ಅವರ ಜಯಂತಿಯನ್ನು ನಂಜನಗೂಡಿನಲ್ಲಿ ಆಚರಿಸಲಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿ ಶಿವಶರಣ ಮುದ್ದಣ್ಣ ಅವರು ವಿಜಯಪುರ ಜಿಲ್ಲೆಯ ಜೋಳದ ಹಾಳ ಗ್ರಾಮದಲ್ಲಿ ಜನಿಸಿದವರು. ಇವರು ಕೃಷಿ ಕಾಯಕದಿಂದಲೇ ದಾಸೋಹ ಮಾಡುತ್ತಾ ಬಂದಿದ್ದ ಅನುಭವಿ ಶಿವಶರಣರಾಗಿದ್ದರು.
ರೈತರಾಗಿ ಬೇಸಾಯ ಮಾಡಿಕೊಂಡು ಬರುವ ಒಕ್ಕಲುತನ ಒಂದು ಶ್ರೇಷ್ಠ ಉದ್ಯೋಗ ಎಂದು ಜನತೆಗೆ ಸಾರಿದ ಮಹಾ ಶಿವಶರಣರಾಗಿದ್ದರು.
ಅಲ್ಲದೆ ಇವರ ಒಟ್ಟು 12 ವಚನಗಳು ದೊರಕಿದ್ದು ಎಲ್ಲವೂ ಉತ್ತಮ ವಚನಗಳಾಗಿವೆ ಎಂದು ಅವರ ವಚನಗಳನ್ನು ಹೇಳುವ ಮೂಲಕ ಅವರ ಬಗ್ಗೆ ಮೆಚ್ಚುಗೆ ಮಾತುಗಳ ನ್ನಾಡಿ ಮುಂದೆ ಅದ್ದೂರಿಯಾಗಿ ಈ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗುವುದರ ಮೂಲಕ ಸರ್ಕಾರದಿಂದಲೂ ಈ ಜಯಂತಿ ಆಚರಣೆ ಮಾಡುವಂತಾಗಲಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನವೀನ್ ಹಾಡ್ಯ, ಅಶೋಕ್, ನಂಜುಂಡಸ್ವಾಮಿ, ಗೋಪಾಲ್, ಕೆಂಪೇಗೌಡ ,
ಸತೀಶ್, ಉಮೇಶ್, ತಿರುಮಲೇಶ್ ಗೌಡ , ಕುಮಾರಸ್ವಾಮಿ, ಕಿಶೋರ್ ,ವೆಂಕಟೇಶ್, ಗಿರಿರಾಜು ಗುರುಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು