3:38 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮುದ್ದೇಬಿಹಾಳ: ಭಕ್ತಸಾಗರದ ನಡುವೆ ನಾಲತವಾಡ ಅಯ್ಯನಗುಡಿ ರಥೋತ್ಸವ; ಪಲ್ಲಕ್ಕಿ ಮೆರವಣಿಗೆ

09/02/2025, 21:12

ಶಿವು ರಾಠೋಡ ಹುಣಸಗಿ ವಿಜಯಪುರ

info.reporterkarnataka@gmail.com
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ನಾಲತವಾಡ ಸರ್ವ ಧರ್ಮಗಳ ಸಾಮರಸ್ಯದ ಪ್ರತೀಕವಾದ ಅಯ್ಯನಗುಡಿ ಗಂಗಪ್ಪಯ್ಯನ ರಥೋತ್ಸವ ನಡೆಯಿತು.

ರಥೋತ್ಸವ ಆರಂಭಕ್ಕೂ ಮುನ್ನ ದೇಗುಲದ ಮುಂಭಾಗದಲ್ಲಿ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಸಹೋದರರ ಸಹಭಾಗಿತ್ವದಲ್ಲಿ ವಿಶ್ವಕರ್ಮ ಸಮಾಜದ ಬಂಧುಗಳ ಪರವಂತಿಕೆ, ನಂದಿ ಕೋಲು ಪ್ರದರ್ಶನ, ಪಲ್ಲಕ್ಕಿ ಮೆರವಣಿಗೆ ರಥದ ಸುತ್ತಲೂ ಪ್ರದಕ್ಷಿಣೆ ನಡೆಯಿತು.
*ಭಕ್ತಿ ಅರ್ಪಣೆ:* ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ಅಪಾರ ಭಕ್ತರ ದಂಡು ರಥಕ್ಕೆ ಉತ್ತತ್ತಿ ಲಿಂಬೆ ಬಾಳೆ ಹಣ್ಣಿನಿಂದ ಎಸೆದು ಗಂಗಪ್ಪಯ್ಯ ಹರ ಹರ ಮಹಾದೇವ ಘೋಷಣೆಯಿಂದ ರಥ ತಲುಪುವ ಸುಮಾರು 200 ಮೀಟರ್ ದೂರದ ಪಾದ ಗಟ್ಟೆದರೆಗೆ ತೆರಳಿ ತಮ್ಮ ಭಕ್ತಿ ತೋರ್ಪಡಿಸಿಕೊಂಡರು.
*ಶಾಸಕರಿಂದ ಚಾಲನೆ:* ರಥ ಎಳೆಯುವ ಮುಂಚೆ ಸಾಂಪ್ರದಾಯದಂತೆ ಗಂಗಪ್ಪಯ್ಯನ ಜಾತ್ರೋತ್ಸವವನ್ನು ಹಬ್ಬದ
ರೂಪದಲ್ಲಿ ಆಚರಿಸಲು ಬಲದಿನ್ನಿ ನಾಡಗೌಡ ಧಣಿಗಳು ವ್ಯವಸ್ಥೆ ಮಾಡಿದ್ದರು. ಶಾಸಕ ಸಿ.ಎಸ್.ನಾಡಗೌಡ ಸಹೋದರರಾದ ಮುನ್ನಾಧಣಿ, ಬಾಳಸಾಹೇಬ, ಪ.ಪಂ ಮಾಜಿ ಅಧ್ಯಕ್ಷ_ ಹಾಲಿ ಸದಸ್ಯರಾದ ಹೃತ್ತಿರಾದ, ರಾಹುಲ್, ರಿತೀಶ್ ಅವರು ರಥೋತ್ಸವಕ್ಕೆ ಪೂಜೆ ನೆರವೇರಿಸಿ ತಾವೂ ಸಹ ರಥದ ಹಗ್ಗಕ್ಕೆ ಕೈ ಜೋಡಿಸಿ ಚಾಲನೆ ನೀಡಿದರು.
*ಬಿಗಿ ಬಂದೋಬಸ್ತ್:* ರಥೋತ್ಸವಕ್ಕೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಮುದ್ದೇಬಿಹಾಳದ ಸಿಪಿಐ ಮಹದ ಫೈಜುದ್ದಿನ್, ಪಿಎಸೈ ತಿಪ್ಪಾರೆಡ್ಡಿ ನೇತೃತ್ವದಲ್ಲಿ ಪೋಲೀಸ್ ಬಂದೋಬಸ್ತ ಕೈಗೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು