7:37 PM Monday2 - February 2026
ಬ್ರೇಕಿಂಗ್ ನ್ಯೂಸ್
ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ

ಇತ್ತೀಚಿನ ಸುದ್ದಿ

ಮುದ್ದೇಬಿಹಾಳ: ಭಕ್ತಸಾಗರದ ನಡುವೆ ನಾಲತವಾಡ ಅಯ್ಯನಗುಡಿ ರಥೋತ್ಸವ; ಪಲ್ಲಕ್ಕಿ ಮೆರವಣಿಗೆ

09/02/2025, 21:12

ಶಿವು ರಾಠೋಡ ಹುಣಸಗಿ ವಿಜಯಪುರ

info.reporterkarnataka@gmail.com
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ನಾಲತವಾಡ ಸರ್ವ ಧರ್ಮಗಳ ಸಾಮರಸ್ಯದ ಪ್ರತೀಕವಾದ ಅಯ್ಯನಗುಡಿ ಗಂಗಪ್ಪಯ್ಯನ ರಥೋತ್ಸವ ನಡೆಯಿತು.

ರಥೋತ್ಸವ ಆರಂಭಕ್ಕೂ ಮುನ್ನ ದೇಗುಲದ ಮುಂಭಾಗದಲ್ಲಿ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಸಹೋದರರ ಸಹಭಾಗಿತ್ವದಲ್ಲಿ ವಿಶ್ವಕರ್ಮ ಸಮಾಜದ ಬಂಧುಗಳ ಪರವಂತಿಕೆ, ನಂದಿ ಕೋಲು ಪ್ರದರ್ಶನ, ಪಲ್ಲಕ್ಕಿ ಮೆರವಣಿಗೆ ರಥದ ಸುತ್ತಲೂ ಪ್ರದಕ್ಷಿಣೆ ನಡೆಯಿತು.
*ಭಕ್ತಿ ಅರ್ಪಣೆ:* ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ಅಪಾರ ಭಕ್ತರ ದಂಡು ರಥಕ್ಕೆ ಉತ್ತತ್ತಿ ಲಿಂಬೆ ಬಾಳೆ ಹಣ್ಣಿನಿಂದ ಎಸೆದು ಗಂಗಪ್ಪಯ್ಯ ಹರ ಹರ ಮಹಾದೇವ ಘೋಷಣೆಯಿಂದ ರಥ ತಲುಪುವ ಸುಮಾರು 200 ಮೀಟರ್ ದೂರದ ಪಾದ ಗಟ್ಟೆದರೆಗೆ ತೆರಳಿ ತಮ್ಮ ಭಕ್ತಿ ತೋರ್ಪಡಿಸಿಕೊಂಡರು.
*ಶಾಸಕರಿಂದ ಚಾಲನೆ:* ರಥ ಎಳೆಯುವ ಮುಂಚೆ ಸಾಂಪ್ರದಾಯದಂತೆ ಗಂಗಪ್ಪಯ್ಯನ ಜಾತ್ರೋತ್ಸವವನ್ನು ಹಬ್ಬದ
ರೂಪದಲ್ಲಿ ಆಚರಿಸಲು ಬಲದಿನ್ನಿ ನಾಡಗೌಡ ಧಣಿಗಳು ವ್ಯವಸ್ಥೆ ಮಾಡಿದ್ದರು. ಶಾಸಕ ಸಿ.ಎಸ್.ನಾಡಗೌಡ ಸಹೋದರರಾದ ಮುನ್ನಾಧಣಿ, ಬಾಳಸಾಹೇಬ, ಪ.ಪಂ ಮಾಜಿ ಅಧ್ಯಕ್ಷ_ ಹಾಲಿ ಸದಸ್ಯರಾದ ಹೃತ್ತಿರಾದ, ರಾಹುಲ್, ರಿತೀಶ್ ಅವರು ರಥೋತ್ಸವಕ್ಕೆ ಪೂಜೆ ನೆರವೇರಿಸಿ ತಾವೂ ಸಹ ರಥದ ಹಗ್ಗಕ್ಕೆ ಕೈ ಜೋಡಿಸಿ ಚಾಲನೆ ನೀಡಿದರು.
*ಬಿಗಿ ಬಂದೋಬಸ್ತ್:* ರಥೋತ್ಸವಕ್ಕೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಮುದ್ದೇಬಿಹಾಳದ ಸಿಪಿಐ ಮಹದ ಫೈಜುದ್ದಿನ್, ಪಿಎಸೈ ತಿಪ್ಪಾರೆಡ್ಡಿ ನೇತೃತ್ವದಲ್ಲಿ ಪೋಲೀಸ್ ಬಂದೋಬಸ್ತ ಕೈಗೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು