4:00 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಮುದ್ದೇಬಿಹಾಳ: ಭಕ್ತಸಾಗರದ ನಡುವೆ ನಾಲತವಾಡ ಅಯ್ಯನಗುಡಿ ರಥೋತ್ಸವ; ಪಲ್ಲಕ್ಕಿ ಮೆರವಣಿಗೆ

09/02/2025, 21:12

ಶಿವು ರಾಠೋಡ ಹುಣಸಗಿ ವಿಜಯಪುರ

info.reporterkarnataka@gmail.com
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ನಾಲತವಾಡ ಸರ್ವ ಧರ್ಮಗಳ ಸಾಮರಸ್ಯದ ಪ್ರತೀಕವಾದ ಅಯ್ಯನಗುಡಿ ಗಂಗಪ್ಪಯ್ಯನ ರಥೋತ್ಸವ ನಡೆಯಿತು.

ರಥೋತ್ಸವ ಆರಂಭಕ್ಕೂ ಮುನ್ನ ದೇಗುಲದ ಮುಂಭಾಗದಲ್ಲಿ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಸಹೋದರರ ಸಹಭಾಗಿತ್ವದಲ್ಲಿ ವಿಶ್ವಕರ್ಮ ಸಮಾಜದ ಬಂಧುಗಳ ಪರವಂತಿಕೆ, ನಂದಿ ಕೋಲು ಪ್ರದರ್ಶನ, ಪಲ್ಲಕ್ಕಿ ಮೆರವಣಿಗೆ ರಥದ ಸುತ್ತಲೂ ಪ್ರದಕ್ಷಿಣೆ ನಡೆಯಿತು.
*ಭಕ್ತಿ ಅರ್ಪಣೆ:* ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ಅಪಾರ ಭಕ್ತರ ದಂಡು ರಥಕ್ಕೆ ಉತ್ತತ್ತಿ ಲಿಂಬೆ ಬಾಳೆ ಹಣ್ಣಿನಿಂದ ಎಸೆದು ಗಂಗಪ್ಪಯ್ಯ ಹರ ಹರ ಮಹಾದೇವ ಘೋಷಣೆಯಿಂದ ರಥ ತಲುಪುವ ಸುಮಾರು 200 ಮೀಟರ್ ದೂರದ ಪಾದ ಗಟ್ಟೆದರೆಗೆ ತೆರಳಿ ತಮ್ಮ ಭಕ್ತಿ ತೋರ್ಪಡಿಸಿಕೊಂಡರು.
*ಶಾಸಕರಿಂದ ಚಾಲನೆ:* ರಥ ಎಳೆಯುವ ಮುಂಚೆ ಸಾಂಪ್ರದಾಯದಂತೆ ಗಂಗಪ್ಪಯ್ಯನ ಜಾತ್ರೋತ್ಸವವನ್ನು ಹಬ್ಬದ
ರೂಪದಲ್ಲಿ ಆಚರಿಸಲು ಬಲದಿನ್ನಿ ನಾಡಗೌಡ ಧಣಿಗಳು ವ್ಯವಸ್ಥೆ ಮಾಡಿದ್ದರು. ಶಾಸಕ ಸಿ.ಎಸ್.ನಾಡಗೌಡ ಸಹೋದರರಾದ ಮುನ್ನಾಧಣಿ, ಬಾಳಸಾಹೇಬ, ಪ.ಪಂ ಮಾಜಿ ಅಧ್ಯಕ್ಷ_ ಹಾಲಿ ಸದಸ್ಯರಾದ ಹೃತ್ತಿರಾದ, ರಾಹುಲ್, ರಿತೀಶ್ ಅವರು ರಥೋತ್ಸವಕ್ಕೆ ಪೂಜೆ ನೆರವೇರಿಸಿ ತಾವೂ ಸಹ ರಥದ ಹಗ್ಗಕ್ಕೆ ಕೈ ಜೋಡಿಸಿ ಚಾಲನೆ ನೀಡಿದರು.
*ಬಿಗಿ ಬಂದೋಬಸ್ತ್:* ರಥೋತ್ಸವಕ್ಕೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಮುದ್ದೇಬಿಹಾಳದ ಸಿಪಿಐ ಮಹದ ಫೈಜುದ್ದಿನ್, ಪಿಎಸೈ ತಿಪ್ಪಾರೆಡ್ಡಿ ನೇತೃತ್ವದಲ್ಲಿ ಪೋಲೀಸ್ ಬಂದೋಬಸ್ತ ಕೈಗೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು