6:16 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ…

ಇತ್ತೀಚಿನ ಸುದ್ದಿ

ಮುದ್ದೇಬಿಹಾಳ: ಭಕ್ತಸಾಗರದ ನಡುವೆ ನಾಲತವಾಡ ಅಯ್ಯನಗುಡಿ ರಥೋತ್ಸವ; ಪಲ್ಲಕ್ಕಿ ಮೆರವಣಿಗೆ

09/02/2025, 21:12

ಶಿವು ರಾಠೋಡ ಹುಣಸಗಿ ವಿಜಯಪುರ

info.reporterkarnataka@gmail.com
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ನಾಲತವಾಡ ಸರ್ವ ಧರ್ಮಗಳ ಸಾಮರಸ್ಯದ ಪ್ರತೀಕವಾದ ಅಯ್ಯನಗುಡಿ ಗಂಗಪ್ಪಯ್ಯನ ರಥೋತ್ಸವ ನಡೆಯಿತು.

ರಥೋತ್ಸವ ಆರಂಭಕ್ಕೂ ಮುನ್ನ ದೇಗುಲದ ಮುಂಭಾಗದಲ್ಲಿ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಸಹೋದರರ ಸಹಭಾಗಿತ್ವದಲ್ಲಿ ವಿಶ್ವಕರ್ಮ ಸಮಾಜದ ಬಂಧುಗಳ ಪರವಂತಿಕೆ, ನಂದಿ ಕೋಲು ಪ್ರದರ್ಶನ, ಪಲ್ಲಕ್ಕಿ ಮೆರವಣಿಗೆ ರಥದ ಸುತ್ತಲೂ ಪ್ರದಕ್ಷಿಣೆ ನಡೆಯಿತು.
*ಭಕ್ತಿ ಅರ್ಪಣೆ:* ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ಅಪಾರ ಭಕ್ತರ ದಂಡು ರಥಕ್ಕೆ ಉತ್ತತ್ತಿ ಲಿಂಬೆ ಬಾಳೆ ಹಣ್ಣಿನಿಂದ ಎಸೆದು ಗಂಗಪ್ಪಯ್ಯ ಹರ ಹರ ಮಹಾದೇವ ಘೋಷಣೆಯಿಂದ ರಥ ತಲುಪುವ ಸುಮಾರು 200 ಮೀಟರ್ ದೂರದ ಪಾದ ಗಟ್ಟೆದರೆಗೆ ತೆರಳಿ ತಮ್ಮ ಭಕ್ತಿ ತೋರ್ಪಡಿಸಿಕೊಂಡರು.
*ಶಾಸಕರಿಂದ ಚಾಲನೆ:* ರಥ ಎಳೆಯುವ ಮುಂಚೆ ಸಾಂಪ್ರದಾಯದಂತೆ ಗಂಗಪ್ಪಯ್ಯನ ಜಾತ್ರೋತ್ಸವವನ್ನು ಹಬ್ಬದ
ರೂಪದಲ್ಲಿ ಆಚರಿಸಲು ಬಲದಿನ್ನಿ ನಾಡಗೌಡ ಧಣಿಗಳು ವ್ಯವಸ್ಥೆ ಮಾಡಿದ್ದರು. ಶಾಸಕ ಸಿ.ಎಸ್.ನಾಡಗೌಡ ಸಹೋದರರಾದ ಮುನ್ನಾಧಣಿ, ಬಾಳಸಾಹೇಬ, ಪ.ಪಂ ಮಾಜಿ ಅಧ್ಯಕ್ಷ_ ಹಾಲಿ ಸದಸ್ಯರಾದ ಹೃತ್ತಿರಾದ, ರಾಹುಲ್, ರಿತೀಶ್ ಅವರು ರಥೋತ್ಸವಕ್ಕೆ ಪೂಜೆ ನೆರವೇರಿಸಿ ತಾವೂ ಸಹ ರಥದ ಹಗ್ಗಕ್ಕೆ ಕೈ ಜೋಡಿಸಿ ಚಾಲನೆ ನೀಡಿದರು.
*ಬಿಗಿ ಬಂದೋಬಸ್ತ್:* ರಥೋತ್ಸವಕ್ಕೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಮುದ್ದೇಬಿಹಾಳದ ಸಿಪಿಐ ಮಹದ ಫೈಜುದ್ದಿನ್, ಪಿಎಸೈ ತಿಪ್ಪಾರೆಡ್ಡಿ ನೇತೃತ್ವದಲ್ಲಿ ಪೋಲೀಸ್ ಬಂದೋಬಸ್ತ ಕೈಗೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು