6:56 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಸೆ.4ರಂದು 2ನೇ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ

27/08/2026, 18:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಸಾಪ ಮಹಿಳಾ ಘಟಕದ ವತಿಯಿಂದ ಸೆ.4ರಂದು ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗ ಮಂದಿರದಲ್ಲಿ 2ನೇ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 8.30 ಗಂಟೆಗೆ ರಾಷ್ಟçಧ್ವಜಾರೋಹಣವನ್ನು ಶಾಸಕಿ ನಯನಾ ಮೋಟಮ್ಮ, ಪರಿಷತ್ತಿನ ಧ್ವಜಾರೋಹಣ ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ನಾಡ ಧ್ವಜಾರೋಹಣವನ್ನು ಕಸಾಪ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾ ಮಂಚೇಗೌಡ ನೆರವೇರಲಿದ್ದಾರೆ. 10ಗಂಟೆಗೆ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಮ್ಮೇಳನಾಧ್ಯಕ್ಷೆ ಭಾಗ್ಯ ಲಕ್ಷ್ಮಣ್ ಗೌಡ ಅವರ ಮೆರವಣಿಗೆ ನಡೆಯಲಿದೆ. ನಂತರ ಮೈಸೂರಿನ ಸಾಹಿತಿ ಡಾ.ಲತಾ ರಾಜಶೇಖರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಎಂಎಲ್‌ಸಿ ಗಾಯಿತ್ರಿ ಶಾಂತೇಗೌಡ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಾಜಿ ಸಚಿವೆ ಮೋಟಮ್ಮ ಅವರ ಅಧ್ಯಕ್ಷತೆಯಲ್ಲಿ ಸ್ತ್ರೀ ಎಂದರೆ ಅಷ್ಟೇ ಸಾಕೇ ಗೋಷ್ಠಿ ನಡೆಯಲಿದ್ದು, ಉದ್ಘಾಟನೆಯನ್ನು ಜಿ.ಪಂ. ಸಿಇಒ ಎಚ್.ಎಸ್.ಕೀರ್ತನಾ ನೆರವೇರಿಸಲಿದ್ದಾರೆಂದು ಹೇಳಿದರು.
ಕಸಾಪ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾ ಮಂಚೇಗೌಡ ಮಾತನಾಡಿ, ಮಧ್ಯಾಹ್ನ 3 ಗಂಟೆಗೆ ಚಿಕ್ಕಮಗಳೂರು ಐಡಿಎಸ್‌ಜಿ ಕಾಲೇಜು ಪ್ರಾಂಶುಪಾಲ ಡಾ. ಪುಷ್ಪಭಾರತಿ ಅಧ್ಯಕ್ಷತೆಯಲ್ಲಿ ಅಮರ ಸ್ವರ ಎಸ್.ಜಾನಕಿ ಅವರಿಗಾಗಿ ಗಾನನಮನ ಗೋಷ್ಠಿ ನಡೆಯಲಿದೆ. ನಂತರ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಕಳಸದ ಡಾ.ಜಾನಕಿ ಸುಂದ್ರೇಶ್, ಚಿಕ್ಕಮಗಳೂರಿನ ಡಾ.ನಾಗಶ್ರೀ ತ್ಯಾಗರಾಜ್, ತರಿಕೆರೆಯ ಡಾ.ನಾಗಜ್ಯೋತಿ ಅವರಿಗೆ ಸಾಹಿತ್ಯ ಸಿರಿ ಪ್ರಶಸ್ತಿ ಪುರಸ್ಕಾರ, ಜಿಲ್ಲೆಯ ಎಲ್ಲಾ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಿಗೆ ಕನ್ನಡಶ್ರೀ ಪ್ರಶಸ್ತಿ ಹಾಗೂ ಎಲ್ಲಾ ತಾಲೂಕಿನಲ್ಲಿ ಕನ್ನಡದ ಕೆಲಸ ಮಾಡುತ್ತಿರುವವರಿಗೆ ಕನ್ನಡ ಸಿರಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಸಮ್ಮೇಳನಕ್ಕೆ ಎಲ್ಲಾ ಸಾಹಿತ್ಯಾಸಕ್ತಿ, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.


ಗೋಷ್ಠಿಯಲ್ಲಿ ಕಸಾಪ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ರೇಕಾ ರವಿರಾಜ್, ಲೇಖಕರ ಬಳಗದ ಅಧ್ಯಕ್ಷೆ ಪ್ರೇಮಾ ಪುಣ್ಯಮೂರ್ತಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು