3:56 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಿಜೆಪಿಯಿಂದ ಅಮಾನತ್ತಾಗಿದ್ದ ಮುಖಂಡರಿಂದ ಗೋಡೆ ಬರಹಕ್ಕೆ ಚಾಲನೆ

23/02/2024, 00:27

ಮೂಡಿಗೆರೆ: ಬಿಜೆಪಿಯಿಂದ ಅಮಾನತ್ತಾಗಿದ್ದ ಮುಖಂಡರಿಂದ ಗೋಡೆ ಬರಹಕ್ಕೆ ಚಾಲನೆ

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ದೇಶಾದ್ಯಂತ ನಡೆಯುತ್ತಿರುವ ಮತ್ತೊಮ್ಮೆ ಮೋದಿ ಸರ್ಕಾರದ ಗೋಡೆ ಬರಹಕ್ಕೆ, ಮೂಡಿಗೆರೆಯ ರೆಬೆಲ್ ಮುಖಂಡರು ಹಲವಾರು ಕಾರ್ಯಕರ್ತರನ್ನು ಸೇರಿಸಿಕೊಂಡು ಚಾಲನೆ ನೀಡಿದ್ದಾರೆ.


ಮೂಡಿಗೆರೆಯ ನಗರದ ಪ್ರಮುಖ ಕಟ್ಟಡಗಳ ಗೋಡೆಗಳ ಮೇಲೆ ಮತ್ತೊಮ್ಮೆ ಮೋದಿ ಸರ್ಕಾರ ಎಂಬ ತಲೆ ಬರಹದ ಕಮಲ ಚಿಹ್ನೆಯ ಗೋಡೆ ಬರಹಗಳನ್ನು ಹಲವು ಕಡೆಗಳಲ್ಲಿ ಬರೆದಿದ್ದಾರೆ. ಇತ್ತೀಚಿಗೆ ಪಕ್ಷದಿಂದ ಅಮಾನತ್ತಾಗಿದ್ದ ರೆಬಲ್ ಮುಖಂಡರಾದ ಪಟ್ಟದೂರು ಪುಟ್ಟಣ್ಣ ಹಾಗೂ ಕನ್ನೇಹಳ್ಳಿ ಭರತ್ ರೊಂದಿಗೆ ‌ ಹಲವಾರು ಮೂಡಿಗೆರೆ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಈ ಸಂದರ್ಭದಲ್ಲಿ ಪುಟ್ಟಣ್ಣ ಮಾತನಾಡಿ ದೇಶದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬರಬೇಕು, ದೇಶದ ಉತ್ತಮ ಆಡಳಿತ ಮತ್ತೆ ಮುಂದುವರಿಯಬೇಕು, ಹಾಗಾಗಿ ಮುಂದಿನ ಚುನಾವಣೆಯಲ್ಲಿ ಹಗಲಿರಲು ಶ್ರಮಿಸುವುದಾಗಿ ತಿಳಿಸಿದರು,
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಜೊತೆಗಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು