7:33 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; 25ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರು ಗಂಭೀರ

19/07/2025, 12:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದೇವನಗೂಲ್ ಗ್ರಾಮದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಫಿನಾಡ ನಿರಂತರ ಮಳೆಯಿಂದ ಮಲೆನಾಡ ಸೌಂದರ್ಯ ಇಮ್ಮಡಿಕೊಂಡಿದ್ದು ನಿತ್ಯ ಸಾವಿರಾರು ಪ್ರವಾಸಿಗರು ಜಿಲ್ಲೆಯ ನಾನಾ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ.


ಇಂದು ಕೂಡ ಕಳಸ ತಾಲೂಕಿನ ಕುದುರೆಮುಖದ ನೇತ್ರಾವತಿ ಪೀಕ್ ಗೆ ಟ್ರಕ್ಕಿಂಗ್ ಗೆಂದು ಬರುತ್ತಿದ್ದ ಬೆಂಗಳೂರು ಮೂಲದ ಖಾಸಗಿ ಬಸ್ ಮಳೆ-ಮಂಜುವಿನ ಕಾರಣದಿಂದಾಗಿ ತಿರುವಿನಲ್ಲಿ ನಿಯಂತ್ರಣ ಪಲ್ಟಿಯಾಗಿದೆ. ಕೂಡಲೇ ಸ್ಥಳೀಯರು ಬಸ್ಸಿನಲ್ಲಿ ಇದ್ದವರನ್ನು ರಕ್ಷಿಸಿದ್ದಾರೆ. 26ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರಗೊಂಡಿದೆ. ಬಸ್ಸಿನಲ್ಲಿದ್ದವರು ಬೆಂಗಳೂರಿನ ಎಂ.ಎನ್.ಸಿ. ಕಂಪನಿಯಲ್ಲಿ ಕೆಲಸ ಮಾಡುವ ಯುವಕ-ಯುವತಿಯರು. ವೀಕ್ ಎಂಡ್ ಹಿನ್ನೆಲೆ ಟ್ರಕ್ಕಿಂಗ್ ಗೆ ಎಂದು ಬರುವಾಗ ಈ ದುರ್ಘಟನೆ ಸಂಭವಿಸದೆ. ಗಾಯಾಳುಗಳನ್ನ ಸಮಾಜ ಸೇವಕ ಆರೀಫ್, ಕೊಟ್ಟಿಗೆಹಾರ ಸಂಜಯ್, ಅತ್ತಿಗೆರೆ ಸಂತೋಷ್, ವಿನಯ್, ಜಲಿಲ್ ,ವರುಣ್ ಸೇರಿದಂತೆ ಸ್ಥಳಿಯ ಯುವಕರು ಮೂಡಿಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು