1:20 PM Saturday19 - July 2025
ಬ್ರೇಕಿಂಗ್ ನ್ಯೂಸ್
Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; 25ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರು ಗಂಭೀರ

19/07/2025, 12:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದೇವನಗೂಲ್ ಗ್ರಾಮದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಫಿನಾಡ ನಿರಂತರ ಮಳೆಯಿಂದ ಮಲೆನಾಡ ಸೌಂದರ್ಯ ಇಮ್ಮಡಿಕೊಂಡಿದ್ದು ನಿತ್ಯ ಸಾವಿರಾರು ಪ್ರವಾಸಿಗರು ಜಿಲ್ಲೆಯ ನಾನಾ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ.


ಇಂದು ಕೂಡ ಕಳಸ ತಾಲೂಕಿನ ಕುದುರೆಮುಖದ ನೇತ್ರಾವತಿ ಪೀಕ್ ಗೆ ಟ್ರಕ್ಕಿಂಗ್ ಗೆಂದು ಬರುತ್ತಿದ್ದ ಬೆಂಗಳೂರು ಮೂಲದ ಖಾಸಗಿ ಬಸ್ ಮಳೆ-ಮಂಜುವಿನ ಕಾರಣದಿಂದಾಗಿ ತಿರುವಿನಲ್ಲಿ ನಿಯಂತ್ರಣ ಪಲ್ಟಿಯಾಗಿದೆ. ಕೂಡಲೇ ಸ್ಥಳೀಯರು ಬಸ್ಸಿನಲ್ಲಿ ಇದ್ದವರನ್ನು ರಕ್ಷಿಸಿದ್ದಾರೆ. 26ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರಗೊಂಡಿದೆ. ಬಸ್ಸಿನಲ್ಲಿದ್ದವರು ಬೆಂಗಳೂರಿನ ಎಂ.ಎನ್.ಸಿ. ಕಂಪನಿಯಲ್ಲಿ ಕೆಲಸ ಮಾಡುವ ಯುವಕ-ಯುವತಿಯರು. ವೀಕ್ ಎಂಡ್ ಹಿನ್ನೆಲೆ ಟ್ರಕ್ಕಿಂಗ್ ಗೆ ಎಂದು ಬರುವಾಗ ಈ ದುರ್ಘಟನೆ ಸಂಭವಿಸದೆ. ಗಾಯಾಳುಗಳನ್ನ ಸಮಾಜ ಸೇವಕ ಆರೀಫ್, ಕೊಟ್ಟಿಗೆಹಾರ ಸಂಜಯ್, ಅತ್ತಿಗೆರೆ ಸಂತೋಷ್, ವಿನಯ್, ಜಲಿಲ್ ,ವರುಣ್ ಸೇರಿದಂತೆ ಸ್ಥಳಿಯ ಯುವಕರು ಮೂಡಿಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು