12:52 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಸ್ಕೂಟರ್ ನಲ್ಲಿ ಸಾಗಿಸುತ್ತಿದ್ದ 130 ಗ್ರಾಂ ಒಣ ಗಾಂಜಾ ವಶ; ಇಬ್ಬರ ಬಂಧನ

31/10/2021, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪಟ್ಟಣ ಪಂಚಾಯಿತಿಯ ವಾಟರ್ ಪಂಪ್ ಹೌಸ್ ಬಳಿ ಸ್ಕೂಟರೊಂದರಲ್ಲಿ ಸಾಗಿಸುತ್ತಿದ್ದ 130 ಗ್ರಾಂ ಒಣ ಗಾಂಜವನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಬಿಳಗುಳ ಗ್ರಾಮದ ಸಾಗರ್ ( 20) ಹಾಗೂ ಮೂಡಿಗೆರೆಯ ಕಸಬಾ ಹೋಬಳಿಯ ಬಿಳಗುಳ ಗ್ರಾಮದ ರಂಜನ್ ಡಿಸೋಜ

(19) ಎಂಬವರು ಅಕ್ರಮವಾಗಿ ಒಣ ಗಾಂಜವನ್ನು ಸಾಗಾಣಿಕೆ ಮಾಡುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ.

ಹೋಂಡಾ ಡಿಯೋ ಸ್ಕೂಟರ್ ಸೀಟಿನ ಕೆಳಭಾಗದಲ್ಲಿ ಪ್ಲಾಸ್ಟಿಕ್ ಕವರಿ ನೊಳಗೆ ಅಕ್ರಮವಾಗಿ ಬೀಜ ಮತ್ತು ತೆನೆ ಗಳನ್ನೊಳಗೊಂಡ ಸುಮಾರು 130 ಗ್ರಾಂ ನಷ್ಟು ಒಣ ಗಾಂಜಾವನ್ನು ಸಾಗಿಸಲಾಗುತ್ತಿತ್ತು.

ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆ 1985 ಕಾಲಂ 8( ಸಿ) 20 (ಬಿ)20(ii) ಮತ್ತು 25ರ ರೀತಿಯಲ್ಲಿ ಅಬಕಾರಿ ನಿರೀಕ್ಷಕರು ಲೋಕೇಶ್ ಅವರು ಮೊಕದ್ದಮೆ ದಾಖಲಿಸಿರುತ್ತಾರೆ.

ಚಿಕ್ಕಮಗಳೂರು ಜಿಲ್ಲೆಯ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಎಂ. ಸಿ. ಪ್ರದೀಪ್-(ಅಬಕಾರಿ ಉಪ ಅಧೀಕ್ಷಕರು), ಲೋಕೇಶ್ 


ಸಿ. (ಅಬಕಾರಿ ನಿರೀಕ್ಷಕರು), ಹೆಚ್. ಪಿ. ಸಂತೋಷ್-(ಅಬಕಾರಿ ಮುಖ್ಯಪೇದೆ), ಶಂಕರ್ ಗುರವ (ಅಬಕಾರಿ ಪೇದೆ) ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು