10:55 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಲೂಕಿಗೆ ಕುಡಿಯುವ ನೀರು ಕೊಡದಷ್ಟು ಸರಕಾರ ಅಸಮರ್ಥವಾಗಿದೆ: ಬಿಜೆಪಿ ತಾಲೂಕು ವಕ್ತಾರ ವಿನಯ್ ಹಳೆಕೋಟೆ ಆರೋಪ

25/03/2024, 18:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನಲ್ಲಿ ಬರ ತಾಂಡವಾಡುತ್ತಿದ್ದು ಜನರಿಗೆ ಕುಡಿಯಲು ನೀರನ್ನು ಕೊಡದಷ್ಟು ಸರ್ಕಾರ ಅಸಮರ್ಥವಾಗಿದ್ದು. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಕಾರ್ಯಗಳು ಕುಂಟಿತ ಆಗಿವೆ ಎಂದು ಬಿಜೆಪಿ ತಾಲೂಕು ವಕ್ತಾರ ವಿನಯ್ ಹಳೆಕೋಟೆ ಆರೋಪಿಸಿದ್ದಾರೆ. ಅವರು ಹೇಳಿಕೆಯಲ್ಲಿ ತಿಳಿಸಿ ಮೋಸ ಕುತಂತ್ರ ಮತ್ತು ಸುಳ್ಳು ಭರವಸೆಗಳಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಬಕ್ಕಸವನ್ನು ಬರಿದು ಮಾಡಿ ದಿವಾಳಿ ಅಂಚಿಗೆ ತಂದಿದ್ದು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿವೆ ಪ್ರಮುಖವಾಗಿ ನಮ್ಮ ಜಿಲ್ಲೆಯಲ್ಲಿ ಬರ ತಾಂಡವಾಡುತ್ತಿದ್ದು ಜನ ಜಾನುವಾರುಗಳಿಗೆ ಕುಡಿಯುವ ನೀರನ್ನು ನೀಡುತ್ತಿಲ್ಲ. ಮೇವಿಲ್ಲದೆ ಗೋವುಗಳನ್ನು ಕಟಕರಿಗೆ ಮಾರಲಾಗುತ್ತಿದೆ. ಇದನ್ನು ತಪ್ಪಿಸಲು ಗೋಶಾಲೆಗಳನ್ನು ತೆರೆಯಬೇಕಾಗಿತ್ತು. ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ನೀರನ್ನು ಒದಗಿಸಲು ಕ್ರಿಯೆ ಯೋಜನೆ ರೂಪಿಸಬೇಕಿತ್ತು. ನಿರಂತರ ವಿದ್ಯುತ್ ನೀಡಲು ಕರೆಂಟ್ ಖರೀದಿ ಕಾರ್ಯಗಳನ್ನು ಮಾಡಬೇಕಿತ್ತು. ಬರದಿಂದ ಕಂಗೆಟ್ಟಿರುವ ರೈತರಿಗೆ ಬೆಳೆಗಳಿಗೆ ನೀರು ಹರಿಸಲು ಸರಿಯಾದ ವಿದ್ಯುತ್ ಕೂಡ ನೀಡುತ್ತಿಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಪ್ರಾರಂಭವಾಗಿದ್ದು ರಾತ್ರಿ ಹಗಲೆನ್ನದೆ ವಿದ್ಯುತ್ ಕಡಿತ ಮಾಡಲಾಗುತ್ತದೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿದೆ.

ಅಧಿಕಾರಿಗಳು ಚುನಾವಣೆ ಹೆಸರಲ್ಲಿ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಸರ್ಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಬರ ನಿರ್ವಹಣೆಗೆ ಅಧಿಕಾರಿಗಳು ಜನಪ್ರತಿನಿಧಿಗಳ ಟಾಸ್ಕ್ ಪೋರ್ಸ್ ರಚಿಸಿಕೊಳ್ಳಬೇಕಿತ್ತು ಇದ್ಯಾವುದನ್ನು ಮಾಡದೆ ಜನರನ್ನು ಸಂಕಷ್ಟಕ್ಕೆ ನೋಡಿದ್ದಾರೆ ಎಂದು ಹೇಳಿದ್ದಾರೆ.

ಪೋಟೊ ವಿನಯ್ ಹಳೆಕೋಟೆ

ಇತ್ತೀಚಿನ ಸುದ್ದಿ

ಜಾಹೀರಾತು