10:52 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಲೂಕಿಗೆ ಕುಡಿಯುವ ನೀರು ಕೊಡದಷ್ಟು ಸರಕಾರ ಅಸಮರ್ಥವಾಗಿದೆ: ಬಿಜೆಪಿ ತಾಲೂಕು ವಕ್ತಾರ ವಿನಯ್ ಹಳೆಕೋಟೆ ಆರೋಪ

25/03/2024, 18:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನಲ್ಲಿ ಬರ ತಾಂಡವಾಡುತ್ತಿದ್ದು ಜನರಿಗೆ ಕುಡಿಯಲು ನೀರನ್ನು ಕೊಡದಷ್ಟು ಸರ್ಕಾರ ಅಸಮರ್ಥವಾಗಿದ್ದು. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಕಾರ್ಯಗಳು ಕುಂಟಿತ ಆಗಿವೆ ಎಂದು ಬಿಜೆಪಿ ತಾಲೂಕು ವಕ್ತಾರ ವಿನಯ್ ಹಳೆಕೋಟೆ ಆರೋಪಿಸಿದ್ದಾರೆ. ಅವರು ಹೇಳಿಕೆಯಲ್ಲಿ ತಿಳಿಸಿ ಮೋಸ ಕುತಂತ್ರ ಮತ್ತು ಸುಳ್ಳು ಭರವಸೆಗಳಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಬಕ್ಕಸವನ್ನು ಬರಿದು ಮಾಡಿ ದಿವಾಳಿ ಅಂಚಿಗೆ ತಂದಿದ್ದು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿವೆ ಪ್ರಮುಖವಾಗಿ ನಮ್ಮ ಜಿಲ್ಲೆಯಲ್ಲಿ ಬರ ತಾಂಡವಾಡುತ್ತಿದ್ದು ಜನ ಜಾನುವಾರುಗಳಿಗೆ ಕುಡಿಯುವ ನೀರನ್ನು ನೀಡುತ್ತಿಲ್ಲ. ಮೇವಿಲ್ಲದೆ ಗೋವುಗಳನ್ನು ಕಟಕರಿಗೆ ಮಾರಲಾಗುತ್ತಿದೆ. ಇದನ್ನು ತಪ್ಪಿಸಲು ಗೋಶಾಲೆಗಳನ್ನು ತೆರೆಯಬೇಕಾಗಿತ್ತು. ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ನೀರನ್ನು ಒದಗಿಸಲು ಕ್ರಿಯೆ ಯೋಜನೆ ರೂಪಿಸಬೇಕಿತ್ತು. ನಿರಂತರ ವಿದ್ಯುತ್ ನೀಡಲು ಕರೆಂಟ್ ಖರೀದಿ ಕಾರ್ಯಗಳನ್ನು ಮಾಡಬೇಕಿತ್ತು. ಬರದಿಂದ ಕಂಗೆಟ್ಟಿರುವ ರೈತರಿಗೆ ಬೆಳೆಗಳಿಗೆ ನೀರು ಹರಿಸಲು ಸರಿಯಾದ ವಿದ್ಯುತ್ ಕೂಡ ನೀಡುತ್ತಿಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಪ್ರಾರಂಭವಾಗಿದ್ದು ರಾತ್ರಿ ಹಗಲೆನ್ನದೆ ವಿದ್ಯುತ್ ಕಡಿತ ಮಾಡಲಾಗುತ್ತದೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿದೆ.

ಅಧಿಕಾರಿಗಳು ಚುನಾವಣೆ ಹೆಸರಲ್ಲಿ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಸರ್ಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಬರ ನಿರ್ವಹಣೆಗೆ ಅಧಿಕಾರಿಗಳು ಜನಪ್ರತಿನಿಧಿಗಳ ಟಾಸ್ಕ್ ಪೋರ್ಸ್ ರಚಿಸಿಕೊಳ್ಳಬೇಕಿತ್ತು ಇದ್ಯಾವುದನ್ನು ಮಾಡದೆ ಜನರನ್ನು ಸಂಕಷ್ಟಕ್ಕೆ ನೋಡಿದ್ದಾರೆ ಎಂದು ಹೇಳಿದ್ದಾರೆ.

ಪೋಟೊ ವಿನಯ್ ಹಳೆಕೋಟೆ

ಇತ್ತೀಚಿನ ಸುದ್ದಿ

ಜಾಹೀರಾತು