3:28 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಲೂಕಿಗೆ ಕುಡಿಯುವ ನೀರು ಕೊಡದಷ್ಟು ಸರಕಾರ ಅಸಮರ್ಥವಾಗಿದೆ: ಬಿಜೆಪಿ ತಾಲೂಕು ವಕ್ತಾರ ವಿನಯ್ ಹಳೆಕೋಟೆ ಆರೋಪ

25/03/2024, 18:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನಲ್ಲಿ ಬರ ತಾಂಡವಾಡುತ್ತಿದ್ದು ಜನರಿಗೆ ಕುಡಿಯಲು ನೀರನ್ನು ಕೊಡದಷ್ಟು ಸರ್ಕಾರ ಅಸಮರ್ಥವಾಗಿದ್ದು. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಕಾರ್ಯಗಳು ಕುಂಟಿತ ಆಗಿವೆ ಎಂದು ಬಿಜೆಪಿ ತಾಲೂಕು ವಕ್ತಾರ ವಿನಯ್ ಹಳೆಕೋಟೆ ಆರೋಪಿಸಿದ್ದಾರೆ. ಅವರು ಹೇಳಿಕೆಯಲ್ಲಿ ತಿಳಿಸಿ ಮೋಸ ಕುತಂತ್ರ ಮತ್ತು ಸುಳ್ಳು ಭರವಸೆಗಳಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಬಕ್ಕಸವನ್ನು ಬರಿದು ಮಾಡಿ ದಿವಾಳಿ ಅಂಚಿಗೆ ತಂದಿದ್ದು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿವೆ ಪ್ರಮುಖವಾಗಿ ನಮ್ಮ ಜಿಲ್ಲೆಯಲ್ಲಿ ಬರ ತಾಂಡವಾಡುತ್ತಿದ್ದು ಜನ ಜಾನುವಾರುಗಳಿಗೆ ಕುಡಿಯುವ ನೀರನ್ನು ನೀಡುತ್ತಿಲ್ಲ. ಮೇವಿಲ್ಲದೆ ಗೋವುಗಳನ್ನು ಕಟಕರಿಗೆ ಮಾರಲಾಗುತ್ತಿದೆ. ಇದನ್ನು ತಪ್ಪಿಸಲು ಗೋಶಾಲೆಗಳನ್ನು ತೆರೆಯಬೇಕಾಗಿತ್ತು. ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ನೀರನ್ನು ಒದಗಿಸಲು ಕ್ರಿಯೆ ಯೋಜನೆ ರೂಪಿಸಬೇಕಿತ್ತು. ನಿರಂತರ ವಿದ್ಯುತ್ ನೀಡಲು ಕರೆಂಟ್ ಖರೀದಿ ಕಾರ್ಯಗಳನ್ನು ಮಾಡಬೇಕಿತ್ತು. ಬರದಿಂದ ಕಂಗೆಟ್ಟಿರುವ ರೈತರಿಗೆ ಬೆಳೆಗಳಿಗೆ ನೀರು ಹರಿಸಲು ಸರಿಯಾದ ವಿದ್ಯುತ್ ಕೂಡ ನೀಡುತ್ತಿಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಪ್ರಾರಂಭವಾಗಿದ್ದು ರಾತ್ರಿ ಹಗಲೆನ್ನದೆ ವಿದ್ಯುತ್ ಕಡಿತ ಮಾಡಲಾಗುತ್ತದೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿದೆ.

ಅಧಿಕಾರಿಗಳು ಚುನಾವಣೆ ಹೆಸರಲ್ಲಿ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಸರ್ಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಬರ ನಿರ್ವಹಣೆಗೆ ಅಧಿಕಾರಿಗಳು ಜನಪ್ರತಿನಿಧಿಗಳ ಟಾಸ್ಕ್ ಪೋರ್ಸ್ ರಚಿಸಿಕೊಳ್ಳಬೇಕಿತ್ತು ಇದ್ಯಾವುದನ್ನು ಮಾಡದೆ ಜನರನ್ನು ಸಂಕಷ್ಟಕ್ಕೆ ನೋಡಿದ್ದಾರೆ ಎಂದು ಹೇಳಿದ್ದಾರೆ.

ಪೋಟೊ ವಿನಯ್ ಹಳೆಕೋಟೆ

ಇತ್ತೀಚಿನ ಸುದ್ದಿ

ಜಾಹೀರಾತು