12:08 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಟಿಪ್ಪರ್ ಗೆ ಸೈಡ್ ಕೊಡಲು ಹೋಗಿ ಹಳ್ಳಕ್ಕೆ ಬಿದ್ದ ಮಂಗಳೂರಿನ ಕಾರು; ಇಬ್ಬರಿಗೆ ಗಾಯ

11/03/2024, 17:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಿರಿದಾದ ಸೇತುವೆಯಲ್ಲಿ ಎದುರಿನಿಂದ ಬಂದ ವಾಹನಕ್ಕೆ ರಸ್ತೆ ಬಿಟ್ಟುಕೊಡಲು ಸಾಧ್ಯವಾಗದೇ ಕಾರೊಂದು ಹಳ್ಳಕ್ಕೆ ಮಗುಚಿ ಬಿದ್ದ ಘಟನೆ ಮೂಡಿಗೆರೆ-ಗೆಂಡೇಹಳ್ಳಿ ರಸ್ತೆಯ ಕನ್ನಾಪುರ ಸಮೀಪದ ಬೊಮ್ಮೇನಹಳ್ಳಿ ಎಂಬಲ್ಲಿ ಈ ಘಟನೆ ನಡೆದಿದೆ.
ಎದುರಿನಿಂದ ಬಂದ ಟಿಪ್ಪರ್ ಲಾರಿಗೆ ಸೈಡ್ ಕೊಡಲು ಸಾಧ್ಯವಾಗದೇ ಇನ್ನೋವಾ ಕಾರೊಂದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ವೇಗವಾಗಿ ಬರುತ್ತಿದ್ದ ಕಾರಿಗೆ ಏಕಾಏಕಿ ಟಿಪ್ಪರ್ ಲಾರಿ ಎದುರಾಗಿದ್ದು, ಅಪಘಾತವನ್ನು ತಪ್ಪಿಸಲು ಕಾರಿನ ಚಾಲಕ ಬ್ರೇಕ್ ಒತ್ತಿದ್ದು, ಕಾರು ನಿಯಂತ್ರಣ ತಪ್ಪಿ ಕಳೆಗೆ ಉರುಳಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಪೆಟ್ಟಾಗಿದ್ದು, ಕಾರು ಜಖಂಗೊಂಡಿದೆ. ಬೇಸಿಗೆ ಆಗಿರುವುದರಿಂದ ಹೊಳೆಯಲ್ಲಿ ಹೆಚ್ಚಿನ ನೀರು ಇಲ್ಲದಿದ್ದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ತಕ್ಷಣ ಸ್ಥಳೀಯರು ನೆರವಿಗೆ ಬಂದು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ.
ಕಾರು ಮಂಗಳೂರು ಮೂಲದ್ದು ಎಂದು ತಿಳಿದುಬಂದಿದ್ದು, ಹಾಸನದಿಂದ ಬೇಲೂರು ಗೆಂಡೇಹಳ್ಳಿ ಮಾರ್ಗವಾಗಿ ಮಂಗಳೂರು ಕಡೆಗೆ ಸಾಗುತ್ತಿದ್ದು ಎನ್ನಲಾಗಿದೆ.
ಬೊಮ್ಮೇನಹಳ್ಳಿ ಸಮೀಪ ಹರಿಯುತ್ತಿರುವ ಹಳ್ಳಕ್ಕೆ ನಿರ್ಮಾಣ ಮಾಡಿರುವ ಸೇತುವೆ ಬಹಳ ಕಿರಿದಾಗಿದ್ದು, ಅಲ್ಲಿ ವಾಹನಗಳು ಏಕಾಏಕಿ ಎದುರಾದಾಗ ಪರಸ್ಪರ ರಸ್ತೆ ಬಿಟ್ಟುಕೊಡಲು ಸಾಧ್ಯವಾಗುತ್ತಿಲ್ಲ. ಸೇತುವೆ ತುಂಬಾ ಕಿರಿದಾಗಿದ್ದು, ಶಿಥಿಲವಾಗಿದೆ. ಸೇತುವೆಗೆ ಯಾವುದೇ ತಡೆಗೋಡೆಯನ್ನು ನಿರ್ಮಾಣ ಮಾಡಿಲ್ಲ. ಏಕಕಾಲದಲ್ಲಿ ಎರಡು ವಾಹನಗಳು ಎದುರಾದಾಗ ತುಂಬಾ ಅಪಘಾತಗಳು ಸಂಭವಿಸಿವೆ. ಇತ್ತೀಚೆಗೆ ಈ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿದ್ದು, ಈ ಸೇತುವೆ ಈಗಿನ ವಾಹನ ದಟ್ಟಣೆಗೆ ಸೂಕ್ತವಾಗಿಲ್ಲ. ಮಳೆಗಾಲದಲ್ಲಿ ಹೊಳೆಯ ನೀರು ಸೇತುವೆಯ ಮೇಲೆಯೇ ಉಕ್ಕಿ ಹರಿಯುತ್ತದೆ. ಜೊತೆಗೆ ಈ ಸೇತುವೆ ತಿರುವಿನಲ್ಲಿ ಇರುವುದರಿಂದ ಎದುರಿನಿಂದ ಬರುವ ವಾಹನಗಳ ಸೂಚನೆಯೂ ತಿಳಿಯುವುದಿಲ್ಲ.
ಹಾಗಾಗಿ ಈ ಸೇತುವೆಯನ್ನು ಅಗಲೀಕರಣಗೊಳಿಸಿ ತಡೆಗೋಡೆ ಸಹಿತ ಉತ್ತಮ ಸೇತುವೆ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಲೇ ಬುರತ್ತಿದ್ದಾರೆ. ಆದರೆ ಇದರ ಬಗ್ಗೆ ಜನಪ್ರಿತಿನಿಧಿಗಳು, ಅಧಿಕಾರಿಗಳು ಗಮನ ಹರಿಸಿಲ್ಲ. ಈ   ಸೇತುವೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸ್ಥಳೀಯ ಮೂಡಿಗೆರೆ ಶಾಸಕರು ಗಮನಹರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು