5:53 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಿನ್ನಡಿ ದೇವಸ್ಥಾನದ ಜಾಗ ಒತ್ತುವರಿ ತೆರವುಗೊಳಿಸಲು ತಾಲೂಕು ದಂಡಾಧಿಕಾರಿಗೆ ಗ್ರಾಮಸ್ಥರ ಮನವಿ

18/09/2025, 22:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ಮೂಡಿಗೆರೆ ತಾಲ್ಲೂಕು ಬಿನ್ನಡಿ ಗ್ರಾಮದಲ್ಲಿ 12ನೇ ಶತಮಾನದಲ್ಲಿ ಕಟ್ಟಿದ ಐತಿಹಾಸಿಕ ಕನ್ನೆರಮ್ಮ ದೇವಸ್ಥಾನವಿದ್ದು ಆ ದೇವಸ್ಥಾನದ ಜೊತೆಗೆ ಬ್ರಹ್ಮಲಿಂಗೇಶ್ವರ, ಬಾಸಮ್ಮ ಹಾಗೂ ದೇವಿರಮ್ಮ ದೇವಸ್ಥಾನಗಳಿಗೆ ಊರಿನ ಹಿರಿಯರು ಮೀಸಲಿಟ್ಟಿದ್ದ ಸುಮಾರು 11 ಎಕರೆ ಜಾಗದಲ್ಲಿ ಮುಕ್ಕಾಲು ಪಾಲು ಒತ್ತುವರಿ ಆಗಿದ್ದು ದೇವಸ್ಥಾನದ ಆಚಾರ ವಿಚಾರಗಳಿಗೆ ಜಾಗವಿಲ್ಲದಂತ ಸ್ಥಿತಿ ನಿರ್ಮಾಣವಾಗಿರುವುದರಿಂದ ಗ್ರಾಮಸ್ಥರು ಹಿಂದೆ ಜಿಲ್ಲಾಧಿಕಾರಿಗಳನ್ನು ಮನವಿ ಮಾಡಿದ್ದರು. ಈಗ ತಾಲ್ಲೂಕು ದಂಡಾಧಿಕಾರಿಗಳಿಗೆ ಭೇಟಿ ಮಾಡಿ ಸರ್ವೇ ಮಾಡಿ ಒತ್ತುವರಿ ತೆರವು ಮಾಡಿಸಿ ದೇವಸ್ಥಾನದ ಜಾಗವನ್ನು ಅಧಿಕೃತ ಮಾಡಿ ಕೊಡುವಂತೆ ಕೋರಲಾಯಿತು.
ಗ್ರಾಮಸ್ಥರೊಂದಿಗೆ ಬಿಜೆಪಿ ನಾಯಕರಾದ ದೀಪಕ್ ದೊಡ್ಡಯ್ಯ, ಗ್ರಾಮಸ್ಥರಾದ ವಿಜೇಂದ್ರ,ರಮೇಶ್,ಬಿ.ಟಿ. ದೇವರಾಜ್, ರವಿ ಕುಮಾರ್, ವೀರೇಂದ್ರ, ಧರ್ಮರಾಜ್, ಸುನೀಲ್, ವೆಂಕಟೇಶ್, ಉಪೇಂದ್ರ,ಲಕ್ಷ್ಮಣ,ವಿನುತ್,ಮೋಹನ್,ಅಭಿಜಿತ್,ಪೂರ್ಣೇಶ್,ಸಂಪತ್,ಅರುಣ್ ಬಿನ್ನಡಿ. ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು